ವಿಜೇತ ವಿದ್ಯಾರ್ಥಿಗಳಿಗೆ ಬೆಳ್ಳಿ ನಾಣ್ಯ ಮತ್ತು ಪ್ರಮಾಣಪತ್ರ ವಿತರಿಸಲಾಯಿತು. ಒಕ್ಕೂಟದ ಉಪಾಧ್ಯಕ್ಷೆ ವರಲಕ್ಷ್ಮಿ ಆರ್.ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ ತಳ್ಳಳ್ಳಿ, ವಿಶ್ವನಾಥರೆಡ್ಡಿ ಮುದ್ನಾಳ ಕಾಲೇಜಿನ ಆಡಳಿತಾಧಿಕಾರಿ ಬಸವರಾಜ ಮಠಪತಿ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಪ್ರಭಾರ ಉಪನಿರ್ದೇಶಕ ಎಸ್.ಎಸ್.ಬರ್ಮಾ, ಉಪನ್ಯಾಸಕಿ ಉಷಾರಡ್ಡಿ, ನಿವೃತ್ತ ಉಪಪ್ರಾಂಶುಪಾಲ ಎಂ.ಬಿ.ಬಳಿಗೇರಿ, ವಿ.ಜಿ.ಅಕ್ಕಾ ಇದ್ದರು.