ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಬಿಜೆಪಿಯ ಕೃಷ್ಣಾ ನಾಯಕ, ದಲಿತರು, ಬಂಜಾರ ಸಮುದಾಯದ ಮಹಿಳೆಯರು ಕಸ ಗುಡಿಸುವುದನ್ನು ಕಂಡಿದ್ದೇವೆ. ಆದರೆ, ಬುರ್ಖಾ ಹಾಕಿಕೊಂಡ ಮಹಿಳೆಯರು ಕಸ ಗುಡಿಸುವುದನ್ನು ನೋಡಿದ್ದೀರಾ ಎಂದರು.
ಇದರಿಂದ ಕೆರಳಿದ ಕಾಂಗ್ರೆಸ್ನ ಅಯೂಬ್ ತಬ್ಬುಖಾನ್ ಕುರ್ಚಿ ಎತ್ತಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಪಾಲಿಕೆಯ ವಿರೋಧ ಪಕ್ಷದ ನಾಯಕ ಅಜ್ಮಲ್ ಗೋಲಾ ಮೇಯರ್ ವಿಶಾಲ ದರ್ಗಿ ಅವರ ಎದುರಿನ ಮೇಜಿನ ಮೇಲೆ ಹತ್ತಿ ಕುಳಿತು ಪ್ರತಿಭಟನೆ ನಡೆಸಿದರು.