<p>ಕಲಬುರಗಿ: ‘ಅಖಿಲ ಭಾರತೀಯ ಕೋಲಿ ಸಮಾಜದಿಂದರಾಷ್ಟ್ರಮಟ್ಟದ ಬೃಹತ್ ಸಮಾವೇಶವನ್ನು ಜೂ.21ರಂದು ಬೆಳಿಗ್ಗೆ 10 ಗಂಟೆಗೆ ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಮಾಜದ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಟಿ.ಡಿ. ರಾಜ್ ತಿಳಿಸಿದರು.</p>.<p>‘ಮುಖ್ಯ ಅತಿಥಿಗಳಾಗಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ವಿಶೇಷ ಅತಿಥಿಯಾಗಿ ಹಿಮಾಚಲಪ್ರದೇಶದ ಸಚಿವ ಕರ್ನಲ್ ಧನಿರಾಮ ಶಾಂಡಿಲ್ ಭಾಗವಹಿಸುವರು. ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ವೀರೇಂದ್ರ ಕಶ್ಯಪ್ ಅಧ್ಯಕ್ಷತೆ ವಹಿಸುವರು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಕರ್ನಾಟಕದ ಟೋಕ್ರಿ ಕೋಲಿ, ಕೋಲಿಢೋರ, ಕೋಲಿಕಬ್ಬಲಿಗ, ಅಂಬಿಗ, ಬಾರಿಕ, ಮೊಗವೀರ, ಹರಿಕಂತ, ಬೆಸ್ತ ವಿವಿಧ ಪರ್ಯಾಯ ಪದಗಳಿಂದ ಕರೆಯುವ ಸಮಾಜದ ಸ್ಥಿತಿಗತಿ, ಎಸ್.ಟಿ ಸೇರ್ಪಡೆ ಕುರಿತಂತೆ ಸಮಾವೇಶದಲ್ಲಿ ಚರ್ಚೆ ನಡೆಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮಾಜದ ಒಗ್ಗಟ್ಟು ಪ್ರದರ್ಶಿಸಲಾಗುವುದು’ ಎಂದರು.</p>.<p>ಸಮಾಜದ ರಾಜ್ಯ ಉಪಾಧ್ಯಕ್ಷೆ ಡಾ.ಇಂದಿರಾ ಶಕ್ತಿ, ಖಜಾಂಚಿ ಮಡಿವಾಳಪ್ಪ ನರಬೋಳಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-34-1467442308</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಅಖಿಲ ಭಾರತೀಯ ಕೋಲಿ ಸಮಾಜದಿಂದರಾಷ್ಟ್ರಮಟ್ಟದ ಬೃಹತ್ ಸಮಾವೇಶವನ್ನು ಜೂ.21ರಂದು ಬೆಳಿಗ್ಗೆ 10 ಗಂಟೆಗೆ ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಮಾಜದ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಟಿ.ಡಿ. ರಾಜ್ ತಿಳಿಸಿದರು.</p>.<p>‘ಮುಖ್ಯ ಅತಿಥಿಗಳಾಗಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ವಿಶೇಷ ಅತಿಥಿಯಾಗಿ ಹಿಮಾಚಲಪ್ರದೇಶದ ಸಚಿವ ಕರ್ನಲ್ ಧನಿರಾಮ ಶಾಂಡಿಲ್ ಭಾಗವಹಿಸುವರು. ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ವೀರೇಂದ್ರ ಕಶ್ಯಪ್ ಅಧ್ಯಕ್ಷತೆ ವಹಿಸುವರು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಕರ್ನಾಟಕದ ಟೋಕ್ರಿ ಕೋಲಿ, ಕೋಲಿಢೋರ, ಕೋಲಿಕಬ್ಬಲಿಗ, ಅಂಬಿಗ, ಬಾರಿಕ, ಮೊಗವೀರ, ಹರಿಕಂತ, ಬೆಸ್ತ ವಿವಿಧ ಪರ್ಯಾಯ ಪದಗಳಿಂದ ಕರೆಯುವ ಸಮಾಜದ ಸ್ಥಿತಿಗತಿ, ಎಸ್.ಟಿ ಸೇರ್ಪಡೆ ಕುರಿತಂತೆ ಸಮಾವೇಶದಲ್ಲಿ ಚರ್ಚೆ ನಡೆಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮಾಜದ ಒಗ್ಗಟ್ಟು ಪ್ರದರ್ಶಿಸಲಾಗುವುದು’ ಎಂದರು.</p>.<p>ಸಮಾಜದ ರಾಜ್ಯ ಉಪಾಧ್ಯಕ್ಷೆ ಡಾ.ಇಂದಿರಾ ಶಕ್ತಿ, ಖಜಾಂಚಿ ಮಡಿವಾಳಪ್ಪ ನರಬೋಳಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-34-1467442308</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>