ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಭಾಗದಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಅಹಿಂದ ಚಿಂತಕರ ವೇದಿಕೆ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನಾ ಪ್ರದರ್ಶನ ನಡೆಸಿದರು.
ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಎಚ್ಕೆಆರ್ಡಿಬಿ)ಗೆ ನಿಗದಿಪಡಿಸಿರುವ ಸಂಪೂರ್ಣ ಅನುದಾನವನ್ನು ಬಿಡುಗಡೆ ಮಾಡಬೇಕು. 2014–15ರಲ್ಲಿ ಕಲಬುರ್ಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ₹400 ಕೋಟಿ ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಬೇಕು. ಪ್ರತಿ ವರ್ಷ ನಿಗದಿಯಾದ ಅನುದಾನಕ್ಕೆ ತಕ್ಕಂತೆ ಕ್ರಿಯಾಯೋಜನೆ ಸಿದ್ಧಪಡಿಸಬೇಕು ಎಂದು ಆಗ್ರಹಿಸಿದರು.
ಸಂಸ್ಥಾಪಕ ಅಧ್ಯಕ್ಷ ಸಾಯಬಣ್ಣ ಜಮಾದಾರ, ರಾಜ್ಯ ಘಟಕದ ಉಪಾಧ್ಯಕ್ಷ ರಾಚಣ್ಣ ಯಡ್ರಾಮಿ, ಕಾರ್ಯದರ್ಶಿ ರಮೇಶ ಹಡಪದ, ಖಜಾಂಚಿ ಸಂಜು ಎಲ್.ಹೊಡಲಕರ್, ಅಧ್ಯಕ್ಷ ಇಸ್ಮಾಯಿಲ್ ಮಾಲಗತ್ತಿ ನೇತೃತ್ವ ವಹಿಸಿದ್ದರು.