<p><strong>ಅಫಜಲಪುರ:</strong> ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ವ್ಯಾಪ್ತಿಯ ಹೋಬಳಿ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಸುನೀಲ್ ಕುಮಾರ್ ವರ್ಗಾವಣೆಯಾಗಿದ್ದು, ಆ ಸ್ಥಾನಕ್ಕೆ ಬರಲು ಅಧಿಕಾರಿಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಅಲ್ಲದೇ ಆ ಸ್ಥಾನಕ್ಕೆ ಬರಲು ₹ 4–5 ಲಕ್ಷದವರೆಗೂ ಹಣ ನೀಡಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿವೆ.</p>.<p>ಜಿಲ್ಲೆಯಲ್ಲಿಯೇ ಅತಿ ಹೆಚ್ಚು ತೋಟಗಾರಿಕೆ ಕ್ಷೇತ್ರ ಅಫಜಲಪುರ ತಾಲ್ಲೂಕಿನಲ್ಲಿದೆ. ನರೇಗಾ ಯೋಜನೆ ಅಡಿಯಲ್ಲಿ ಸಾಕಷ್ಟು ರೈತರು ಬಾಳೆ, ಪಪ್ಪಾಯಿ, ನುಗ್ಗೆ, ಲಿಂಬು, ಈರುಳ್ಳಿ, ಮೆಣಸಿನಕಾಯಿ, ದ್ರಾಕ್ಷಿ ಹಾಗೂ ತರಕಾರಿಯನ್ನು ಬೆಳೆಯುತ್ತಾರೆ. ಸರ್ಕಾರದಿಂದ ಅನುದಾನವೂ ಹೆಚ್ಚಿದೆ. ಹೀಗಾಗಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಈ ತಾಲ್ಲೂಕಿಗೆ ವರ್ಗವಾಗಿ ಬರಲು ಪೈಪೋಟಿ ನಡೆಸುತ್ತಾರೆ ಎಂದು ರೈತರು ಹೇಳುತ್ತಾರೆ.</p>.<p>ಹೋಬಳಿ ಕೇಂದ್ರದಲ್ಲಿ ಸುನಿಲ್ ಕುಮಾರ್ ಎಂಬವರು ಸಹಾಯಕ ತೋಟಗಾರಿಕೆ ಅಧಿಕಾರಿಯಾಗಿ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅವರನ್ನು ಬೇರೆಡೆ ವರ್ಗಾವಣೆ ಮಾಡಿಸಿ, ಆ ಹುದ್ದೆಗೆ ತಾವು ಬರಬೇಕು ಎಂದು ನಾಲ್ವರು ಅಧಿಕಾರಿಗಳು ಒಂದು ತಿಂಗಳಿಂದ ಕಸರತ್ತು ನಡೆಸಿದ್ದಾರೆ. ಇಲ್ಲಿಗೆ ಬರಲು ₹4 ಲಕ್ಷದಿಂದ ₹5 ಲಕ್ಷದವರೆಗೆ ಹಣ ನೀಡಲು ಅಧಿಕಾರಿಗಳು ಸಿದ್ಧವಾಗಿದ್ದಾರೆ ಎನ್ನಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ವ್ಯಾಪ್ತಿಯ ಹೋಬಳಿ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಸುನೀಲ್ ಕುಮಾರ್ ವರ್ಗಾವಣೆಯಾಗಿದ್ದು, ಆ ಸ್ಥಾನಕ್ಕೆ ಬರಲು ಅಧಿಕಾರಿಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಅಲ್ಲದೇ ಆ ಸ್ಥಾನಕ್ಕೆ ಬರಲು ₹ 4–5 ಲಕ್ಷದವರೆಗೂ ಹಣ ನೀಡಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿವೆ.</p>.<p>ಜಿಲ್ಲೆಯಲ್ಲಿಯೇ ಅತಿ ಹೆಚ್ಚು ತೋಟಗಾರಿಕೆ ಕ್ಷೇತ್ರ ಅಫಜಲಪುರ ತಾಲ್ಲೂಕಿನಲ್ಲಿದೆ. ನರೇಗಾ ಯೋಜನೆ ಅಡಿಯಲ್ಲಿ ಸಾಕಷ್ಟು ರೈತರು ಬಾಳೆ, ಪಪ್ಪಾಯಿ, ನುಗ್ಗೆ, ಲಿಂಬು, ಈರುಳ್ಳಿ, ಮೆಣಸಿನಕಾಯಿ, ದ್ರಾಕ್ಷಿ ಹಾಗೂ ತರಕಾರಿಯನ್ನು ಬೆಳೆಯುತ್ತಾರೆ. ಸರ್ಕಾರದಿಂದ ಅನುದಾನವೂ ಹೆಚ್ಚಿದೆ. ಹೀಗಾಗಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಈ ತಾಲ್ಲೂಕಿಗೆ ವರ್ಗವಾಗಿ ಬರಲು ಪೈಪೋಟಿ ನಡೆಸುತ್ತಾರೆ ಎಂದು ರೈತರು ಹೇಳುತ್ತಾರೆ.</p>.<p>ಹೋಬಳಿ ಕೇಂದ್ರದಲ್ಲಿ ಸುನಿಲ್ ಕುಮಾರ್ ಎಂಬವರು ಸಹಾಯಕ ತೋಟಗಾರಿಕೆ ಅಧಿಕಾರಿಯಾಗಿ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅವರನ್ನು ಬೇರೆಡೆ ವರ್ಗಾವಣೆ ಮಾಡಿಸಿ, ಆ ಹುದ್ದೆಗೆ ತಾವು ಬರಬೇಕು ಎಂದು ನಾಲ್ವರು ಅಧಿಕಾರಿಗಳು ಒಂದು ತಿಂಗಳಿಂದ ಕಸರತ್ತು ನಡೆಸಿದ್ದಾರೆ. ಇಲ್ಲಿಗೆ ಬರಲು ₹4 ಲಕ್ಷದಿಂದ ₹5 ಲಕ್ಷದವರೆಗೆ ಹಣ ನೀಡಲು ಅಧಿಕಾರಿಗಳು ಸಿದ್ಧವಾಗಿದ್ದಾರೆ ಎನ್ನಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>