<p><strong>ಕಲಬುರಗಿ</strong>: ನಗರದ ಹೊರವಲಯದ ತಾವರಗೇರಾ ಕ್ರಾಸ್ ಸಮೀಪದಲ್ಲಿ ಇಬ್ಬರು ಮಹಿಳಾ ಕಾರ್ಮಿಕರನ್ನು ಕೊಲೆ ಮಾಡಿ ಐದು ತಿಂಗಳು ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ, ಜಿಲ್ಲಾಡಳಿತ ಪರಿಹಾರವೂ ನೀಡಿಲ್ಲ ಎಂದು ಶ್ರಮಯೋಗಿ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಟ್ರೇಡ್ ಯೂನಿಯನ್ ಮುಖಂಡರು ದೂರಿದ್ದಾರೆ.</p>.<p>ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಕಾರ್ಮಿಕ ಸಂಘಟನೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಕೊಲೆಯಾದ ಮಹಿಳೆಯರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಲಾಗಿತ್ತು. ಕಾಟಾಚಾರಕ್ಕೆ ಎಂಬಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಟ್ಟಡ ಕಾರ್ಮಿಕರ ಮರಣ ಪರಿಹಾರ ಧನ ಅಡಿ ₹75 ಸಾವಿರ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಇಬ್ಬರೂ ಮಹಿಳಾ ಕಾರ್ಮಿಕರ ಕುಟುಂಬಸ್ಥರು ಕಡುಬಡವರಾಗಿದ್ದು, ರಾಜ್ಯ ಸರ್ಕಾರ ತಲಾ ₹10 ಲಕ್ಷ ಹಾಗೂ ಇಲಾಖೆ ತಲಾ ₹5 ಲಕ್ಷ ಪರಿಹಾರ ನೀಡಬೇಕು. ಒಬ್ಬ ಸದಸ್ಯರಿಗೆ ಸರ್ಕಾರ ನೌಕರಿ ಕೊಡಬೇಕು ಎಂದು ಯೂನಿಯನ್ ಮುಖಂಡರಾದ ಮಲ್ಲಿಕಾರ್ಜುನ ಎಸ್.ಮಾಳಗೆ, ಸಂಜುಕುಮಾರ ಗುತ್ತೇದಾರ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ನಗರದ ಹೊರವಲಯದ ತಾವರಗೇರಾ ಕ್ರಾಸ್ ಸಮೀಪದಲ್ಲಿ ಇಬ್ಬರು ಮಹಿಳಾ ಕಾರ್ಮಿಕರನ್ನು ಕೊಲೆ ಮಾಡಿ ಐದು ತಿಂಗಳು ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ, ಜಿಲ್ಲಾಡಳಿತ ಪರಿಹಾರವೂ ನೀಡಿಲ್ಲ ಎಂದು ಶ್ರಮಯೋಗಿ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಟ್ರೇಡ್ ಯೂನಿಯನ್ ಮುಖಂಡರು ದೂರಿದ್ದಾರೆ.</p>.<p>ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಕಾರ್ಮಿಕ ಸಂಘಟನೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಕೊಲೆಯಾದ ಮಹಿಳೆಯರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಲಾಗಿತ್ತು. ಕಾಟಾಚಾರಕ್ಕೆ ಎಂಬಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಟ್ಟಡ ಕಾರ್ಮಿಕರ ಮರಣ ಪರಿಹಾರ ಧನ ಅಡಿ ₹75 ಸಾವಿರ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಇಬ್ಬರೂ ಮಹಿಳಾ ಕಾರ್ಮಿಕರ ಕುಟುಂಬಸ್ಥರು ಕಡುಬಡವರಾಗಿದ್ದು, ರಾಜ್ಯ ಸರ್ಕಾರ ತಲಾ ₹10 ಲಕ್ಷ ಹಾಗೂ ಇಲಾಖೆ ತಲಾ ₹5 ಲಕ್ಷ ಪರಿಹಾರ ನೀಡಬೇಕು. ಒಬ್ಬ ಸದಸ್ಯರಿಗೆ ಸರ್ಕಾರ ನೌಕರಿ ಕೊಡಬೇಕು ಎಂದು ಯೂನಿಯನ್ ಮುಖಂಡರಾದ ಮಲ್ಲಿಕಾರ್ಜುನ ಎಸ್.ಮಾಳಗೆ, ಸಂಜುಕುಮಾರ ಗುತ್ತೇದಾರ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>