<p>ವಡಗೇರಾ: ತಾಲ್ಲೂಕಿನ ಕೋನಹಳ್ಳಿಯಿಂದ ರೋಟ್ನಡಗಿ ಕ್ರಾಸ್ವರೆಗಿನ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ವಾಹನ ಸವಾರರು ಹಾಗೂ ರೈತರು ದೂರಿದ್ದಾರೆ.</p>.<p>ರಸ್ತೆಯಲ್ಲಿ ದೊಡ್ಡಮಟ್ಟದ ಕಂದಕಗಳು ಬಿದ್ದಿವೆ. ಹಾಗೆಯೇ ರಸ್ತೆಗೆ ಹಾಕಿರುವ ಟಾರ್ ಕಿತ್ತು, ಜಲ್ಲಿ ಕಲ್ಲುಗಳು ರಸ್ತೆಯ ತುಂಬೆಲ್ಲ ಹರಡಿವೆ. ವಾಹನ ಸವಾರರು ಸ್ವಲ್ಪ ಮೈಮರೆತರೆ ವಾಹನದಿಂದ ಬಿದ್ದು ಕೈಕಾಲು ಮುರಿದುಕೊಳ್ಳುವದು ಗ್ಯಾರಂಟಿ ಎಂದು ಈ ರಸ್ತೆ ಪ್ರಯಾಣಿಕರು ದೂರುತ್ತಾರೆ.</p>.<p>ಕೇವಲ 9 ಕಿ.ಮೀ ಅಂತರವನ್ನು ಕ್ರಮಿಸಲು ವಾಹನಗಳು ಸುಮಾರು ಮುಕ್ಕಾಲು ಗಂಟೆ ಸಮಯ ತೆಗೆದುಕೊಳ್ಳುತ್ತವೆ. ಇದರಿಂದಾಗಿ ವಾಹನ ಸವಾರರು ಸಕಾಲದಲ್ಲಿ ತಮ್ಮ ಸ್ಥಳವನ್ನು ತಲುಪಲು ಆಗುತ್ತಿಲ್ಲ. ಹಾಗೆಯೇ ತುರ್ತು ಸಮಯದಲ್ಲಿ ರೋಗಿಗಳಿಗೆ, ಗರ್ಭಿಣಿಯರಿಗೆ ವಡಗೇರಾದಲ್ಲಿ ಇರುವ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾದರೆ ಸಾಕಷ್ಟು ಸಮಸ್ಯೆಯಾಗುತ್ತಿದೆ.</p>.<p>ಇನ್ನು ರೈತರು ಬಂಡಿಯಲ್ಲಿ ಕೃಷಿ ಸಾಮಗ್ರಿಗಳನ್ನು ತೆಗೆದುಕೊಂಡು ಜಮೀನುಗಳಿಗೆ ತೆರಳಬೇಕಾದರೆ ಹರಸಾಹಸ ಪಡಬೇಕು ಎಂದು ರೈತರು ಹೇಳುತ್ತಾರೆ.</p>.<p>ಈ ರಸ್ತೆ ದುರಸ್ತಿ ಬಗ್ಗೆ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಡಗೇರಾ: ತಾಲ್ಲೂಕಿನ ಕೋನಹಳ್ಳಿಯಿಂದ ರೋಟ್ನಡಗಿ ಕ್ರಾಸ್ವರೆಗಿನ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ವಾಹನ ಸವಾರರು ಹಾಗೂ ರೈತರು ದೂರಿದ್ದಾರೆ.</p>.<p>ರಸ್ತೆಯಲ್ಲಿ ದೊಡ್ಡಮಟ್ಟದ ಕಂದಕಗಳು ಬಿದ್ದಿವೆ. ಹಾಗೆಯೇ ರಸ್ತೆಗೆ ಹಾಕಿರುವ ಟಾರ್ ಕಿತ್ತು, ಜಲ್ಲಿ ಕಲ್ಲುಗಳು ರಸ್ತೆಯ ತುಂಬೆಲ್ಲ ಹರಡಿವೆ. ವಾಹನ ಸವಾರರು ಸ್ವಲ್ಪ ಮೈಮರೆತರೆ ವಾಹನದಿಂದ ಬಿದ್ದು ಕೈಕಾಲು ಮುರಿದುಕೊಳ್ಳುವದು ಗ್ಯಾರಂಟಿ ಎಂದು ಈ ರಸ್ತೆ ಪ್ರಯಾಣಿಕರು ದೂರುತ್ತಾರೆ.</p>.<p>ಕೇವಲ 9 ಕಿ.ಮೀ ಅಂತರವನ್ನು ಕ್ರಮಿಸಲು ವಾಹನಗಳು ಸುಮಾರು ಮುಕ್ಕಾಲು ಗಂಟೆ ಸಮಯ ತೆಗೆದುಕೊಳ್ಳುತ್ತವೆ. ಇದರಿಂದಾಗಿ ವಾಹನ ಸವಾರರು ಸಕಾಲದಲ್ಲಿ ತಮ್ಮ ಸ್ಥಳವನ್ನು ತಲುಪಲು ಆಗುತ್ತಿಲ್ಲ. ಹಾಗೆಯೇ ತುರ್ತು ಸಮಯದಲ್ಲಿ ರೋಗಿಗಳಿಗೆ, ಗರ್ಭಿಣಿಯರಿಗೆ ವಡಗೇರಾದಲ್ಲಿ ಇರುವ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾದರೆ ಸಾಕಷ್ಟು ಸಮಸ್ಯೆಯಾಗುತ್ತಿದೆ.</p>.<p>ಇನ್ನು ರೈತರು ಬಂಡಿಯಲ್ಲಿ ಕೃಷಿ ಸಾಮಗ್ರಿಗಳನ್ನು ತೆಗೆದುಕೊಂಡು ಜಮೀನುಗಳಿಗೆ ತೆರಳಬೇಕಾದರೆ ಹರಸಾಹಸ ಪಡಬೇಕು ಎಂದು ರೈತರು ಹೇಳುತ್ತಾರೆ.</p>.<p>ಈ ರಸ್ತೆ ದುರಸ್ತಿ ಬಗ್ಗೆ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>