<p><strong>ಕಲಬುರಗಿ: </strong>ತಳವಾರ, ಕೋಲಿ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಮಾಡುವಂತೆ ಕೋರಿದರು ಎನ್ನಲಾದ ಪತ್ರವನ್ನು ಮುಖಂಡರೊಬ್ಬರು ಕಾರಿನೊಳಗೆ ಕುಳಿತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಎಸೆದರು.</p>.<p>ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಪ್ರಯುಕ್ತ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ, ಮುಖ್ಯಮಂತ್ರಿಗಳು ನೆರೆದವರನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಕಪ್ಪು ಬಟ್ಟೆ ಪ್ರದರ್ಶನದಿಂದಾಗಿ ಭಾಷಣವನ್ನು ಮೊಟಕುಗೊಳಿಸಿ, ಅಲ್ಲಿಂದ ನೇರವಾಗಿ ಪರೇಡ್ ಮೈದಾನದತ್ತ ತೆರಳುತ್ತಿದ್ದರು.</p>.<p>ಮಾರ್ಗ ಮಧ್ಯದ ಕನ್ನಡ ಭವನ ಮುಂಭಾಗದಲ್ಲಿ ಪೊಲೀಸ್ ವಾಹನದೊಳಗೆ ಕುಳಿತಿದ್ದವರು ಕಿಟಕಿ, ಬಾಗಿಲಿನಿಂದ ಹೊರ ಇಣುಕಿ ಧಿಕ್ಕಾರ ಕೂಗಿದರು. ಈ ವೇಳ ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ಮುಖ್ಯಮಂತ್ರಿಗಳ ಕಾರು ನಿಧಾನವಾಗಿ ಚಲಿಸುತ್ತಿತ್ತು. ಜನರ ಮಧ್ಯದಿಂದ ಕೆಲವು ಸಮುದಾಯದ ಮುಖಂಡರೊಬ್ಬರು ಸಿ.ಎಂ ಕಾರಿನೊಳಗೆ ಮನವಿ ಪತ್ರ ಎಸೆದರು. ತಕ್ಷಣವೇ ಪೊಲೀಸರು ಆತನನ್ನು ವಶಕ್ಕೆ ಪಡೆದರು.</p>.<p>ಕೋಲಿ ಸಮುದಾಯದ ಕೆಲವರು ಮನವಿ ಪತ್ರ ಎಸೆದದ್ದು ನಮ್ಮವರು ಎಂದರೆ ಮತ್ತೆ ಕೆಲವರು, ಆತ ನಮ್ಮವರು ಅಲ್ಲ ಎಂದು ಹೇಳಿದರು.</p>.<p><strong>ಓದಿ...<a href="https://www.prajavani.net/district/kalaburagi/cm-basavaraj-bommai-was-shown-black-clothes-by-locals-at-kalaburagi-972759.html" target="_blank">Video: ಕಲಬುರಗಿಯಲ್ಲಿ ಸಿಎಂಬಸವರಾಜ ಬೊಮ್ಮಾಯಿಗೆ ಕಪ್ಪು ಬಟ್ಟೆ ಪ್ರದರ್ಶನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: </strong>ತಳವಾರ, ಕೋಲಿ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಮಾಡುವಂತೆ ಕೋರಿದರು ಎನ್ನಲಾದ ಪತ್ರವನ್ನು ಮುಖಂಡರೊಬ್ಬರು ಕಾರಿನೊಳಗೆ ಕುಳಿತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಎಸೆದರು.</p>.<p>ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಪ್ರಯುಕ್ತ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ, ಮುಖ್ಯಮಂತ್ರಿಗಳು ನೆರೆದವರನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಕಪ್ಪು ಬಟ್ಟೆ ಪ್ರದರ್ಶನದಿಂದಾಗಿ ಭಾಷಣವನ್ನು ಮೊಟಕುಗೊಳಿಸಿ, ಅಲ್ಲಿಂದ ನೇರವಾಗಿ ಪರೇಡ್ ಮೈದಾನದತ್ತ ತೆರಳುತ್ತಿದ್ದರು.</p>.<p>ಮಾರ್ಗ ಮಧ್ಯದ ಕನ್ನಡ ಭವನ ಮುಂಭಾಗದಲ್ಲಿ ಪೊಲೀಸ್ ವಾಹನದೊಳಗೆ ಕುಳಿತಿದ್ದವರು ಕಿಟಕಿ, ಬಾಗಿಲಿನಿಂದ ಹೊರ ಇಣುಕಿ ಧಿಕ್ಕಾರ ಕೂಗಿದರು. ಈ ವೇಳ ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ಮುಖ್ಯಮಂತ್ರಿಗಳ ಕಾರು ನಿಧಾನವಾಗಿ ಚಲಿಸುತ್ತಿತ್ತು. ಜನರ ಮಧ್ಯದಿಂದ ಕೆಲವು ಸಮುದಾಯದ ಮುಖಂಡರೊಬ್ಬರು ಸಿ.ಎಂ ಕಾರಿನೊಳಗೆ ಮನವಿ ಪತ್ರ ಎಸೆದರು. ತಕ್ಷಣವೇ ಪೊಲೀಸರು ಆತನನ್ನು ವಶಕ್ಕೆ ಪಡೆದರು.</p>.<p>ಕೋಲಿ ಸಮುದಾಯದ ಕೆಲವರು ಮನವಿ ಪತ್ರ ಎಸೆದದ್ದು ನಮ್ಮವರು ಎಂದರೆ ಮತ್ತೆ ಕೆಲವರು, ಆತ ನಮ್ಮವರು ಅಲ್ಲ ಎಂದು ಹೇಳಿದರು.</p>.<p><strong>ಓದಿ...<a href="https://www.prajavani.net/district/kalaburagi/cm-basavaraj-bommai-was-shown-black-clothes-by-locals-at-kalaburagi-972759.html" target="_blank">Video: ಕಲಬುರಗಿಯಲ್ಲಿ ಸಿಎಂಬಸವರಾಜ ಬೊಮ್ಮಾಯಿಗೆ ಕಪ್ಪು ಬಟ್ಟೆ ಪ್ರದರ್ಶನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>