‘ಬಾಗಲಕೋಟೆ ಜಿಲ್ಲೆಯಿಂದ ಮಣ್ಣಿನ ಮೂರ್ತಿಗಳನ್ನು ತರಿಸುತ್ತೇವೆ. ಬೇಡಿಕೆಗೆ ಅನುಗುಣವಾಗಿ ಮೊದಲೇ ಮುಂಗಡ ಪಾವತಿಸುತ್ತೇವೆ. ರಾಸಾಯನಿಕ ಬಣ್ಣ ಬಳಿದ ಗಣೇಶ ಮೂರ್ತಿಗಳನ್ನು ಕೆರೆ, ಬಾವಿಗಳಲ್ಲಿ ವಿಸರ್ಜಿಸುವುದರಿಂದ ಪರಿಸರದ ಮೇಲೆ ಉಂಟಾಗುವ ಹಾನಿಯ ಬಗ್ಗೆ ಜನರಲ್ಲಿ ಅರಿವು ಮೂಡಿದೆ. ಹೀಗಾಗಿ ಮಣ್ಣಿನ ಮೂರ್ತಿಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ’ ಎಂಬುದು ಅವರ ವಿವರಣೆ.