ಈಗಾಗಲೇ ಮುಂಗಾರು ಬಿತ್ತನೆ ಆರಂಭವಾಗಿದ್ದು, ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಬಿತ್ತನೆ ಬೀಜ, ರಸಗೊಬ್ಬರ, ಕ್ರಿಮಿನಾಶಕ, ವಿದ್ಯುತ್ ಅನ್ನು ಸಬ್ಸಿಡಿ ದರದಲ್ಲಿ ಬೇಡಿಕೆ ಇರುವವರೆಗೂ ಸರಬರಾಜು ಮಾಡಬೇಕು. ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಜುಲೈ 1ರಂದು ಕಲ್ಯಾಣ
ಕರ್ನಾಟಕ ಭಾಗದ ಜಿಲ್ಲೆಗಳು ಹಾಗೂ ವಿಜಯಪುರ ಜಿಲ್ಲೆಯ ಸಂಸದರಮನೆ ಎದುರು ಧರಣಿ ಮಾಡಲಾಗುವುದು ಎಂದು ಅವರು ತಿಳಿಸಿದರು.