<p><strong>ಕಮಲಾಪುರ:</strong> ತಾಲ್ಲೂಕು ಕೇಂದ್ರ ಕಮಲಾಪುರದಲ್ಲಿ ತಾಲ್ಲೂಕು ಮಟ್ಟದ ಬಸ್ ನಿಲ್ದಾಣ ನಿರ್ಮಿಸಬೇಕು ಎಂದು ತಾ.ಪಂ ಮಾಜಿ ಸದಸ್ಯ ಅಮೃತಗೌರೆ ಒತ್ತಾಯಿಸಿದರು.</p>.<p>ಪಟ್ಟಣದ ಬಸ್ ನಿಲ್ದಾಣದ ಎದುರು ಧರಣಿ ನಡೆಸಿದ ಅವರು, ‘ಸರ್ಕಾರಿ ಪದವಿ ಕಾಲೇಜಿನ ಪಕ್ಕದಲ್ಲಿ 4 ಎಕರೆ ಸರ್ಕಾರಿ ಭೂಮಿ ಇದೆ. ಸದ್ಯದ ತಹಶೀಲ್ದಾರ್ ಕಚೇರಿ ತೆರವುಗೊಳಿಸುವ ಜಾಗ ಬಸ್ ನಿಲ್ದಾಣಕ್ಕೆ ಜಾಗ ಒದಗಿಸಬೇಕು. ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಬೇಕು’ ಎಂದು ಆಗ್ರಹಿಸಿದರು.</p>.<p>ಬೀದದ್, ಬಸವಕಲ್ಯಾಣ, ಹುಮನಾಬಾದ್ ಸೇರಿದಂತೆ ನೆರೆಯ ಮಹಾರಾಷ್ಟ್ರ, ತೆಲಂಗಾಣದಿಂದ ಅನೇಕ ಭಕ್ತರು ಕಮಲಾಪುರ ಮಾರ್ಗದಿಂದ ರೇವಣಸಿದ್ದೇಶ್ವರರ ದರ್ಶನಕ್ಕೆ ಆಗಮಿಸುತ್ತಿದ್ದು ಕೂಡಲೇ ಕಮಲಾಪುರ-ರೇವಗ್ಗಿ ರೇವಣಸಿದ್ದೇಶ್ವರ ಗುಡ್ಡಕ್ಕೆ ಬಸ್ ಸಂಚಾರ ಆರಂಭಿಸಬೇಕು. ಅರಣಕಲ್, ರೇವಗ್ಗಿ ಮತ್ತಿತರ ಗ್ರಾಮಗಳು ಕಮಲಾಪುರ ತಾಲ್ಲೂಕಿಗೆ ಸೇರ್ಪಡೆಗೊಂಡಿವೆ. ಮಕ್ಕಳು ಕಮಲಾಪುರ ಶಾಲಾ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. ಕೂಡಲೇ ಬಸ್ ಸಂಚಾರ ಆರಂಭಿಸಬೇಕು ಎಂದರು.</p>.<p>ರಾಷ್ಟ್ರೀಯ ಹೆದ್ದಾರಿ ಮೇಲೆ ವಾಹನಗಳು ಅತಿ ವೇಗದಲ್ಲಿ ಸಂಚರಿಸುತ್ತಿವೆ. ವಾಹನಗಳ ವೇಗ ನಿಯಂತ್ರಿಸಲು ಹಂಪ್ಗಳನ್ನು ಹಾಕಬೇಕು. ಪೊಲೀಸ್ ಠಾಣೆಯಿಂದ ಡಯಟ್ ಕಚೇರಿವರೆಗೆ ಏಕಪಥ ರಸ್ತೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಗ್ರೇಡ್ 2 ತಹಶೀಲ್ದಾರ್ ಶಿವಕುಮಾರ ಶಾಬಾ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಮುಖಂಡರಾದ ವಿಜಯಕುಮಾರ ಪಾಟೀಲ ರಟಕಲ್, ಸಿದ್ದಣಗೌಡ ಅರಣಕಲ್, ದಶರಥ ವಗ್ಗಿ ಮತ್ತಿತರರು ಹಾಜರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ:</strong> ತಾಲ್ಲೂಕು ಕೇಂದ್ರ ಕಮಲಾಪುರದಲ್ಲಿ ತಾಲ್ಲೂಕು ಮಟ್ಟದ ಬಸ್ ನಿಲ್ದಾಣ ನಿರ್ಮಿಸಬೇಕು ಎಂದು ತಾ.ಪಂ ಮಾಜಿ ಸದಸ್ಯ ಅಮೃತಗೌರೆ ಒತ್ತಾಯಿಸಿದರು.</p>.<p>ಪಟ್ಟಣದ ಬಸ್ ನಿಲ್ದಾಣದ ಎದುರು ಧರಣಿ ನಡೆಸಿದ ಅವರು, ‘ಸರ್ಕಾರಿ ಪದವಿ ಕಾಲೇಜಿನ ಪಕ್ಕದಲ್ಲಿ 4 ಎಕರೆ ಸರ್ಕಾರಿ ಭೂಮಿ ಇದೆ. ಸದ್ಯದ ತಹಶೀಲ್ದಾರ್ ಕಚೇರಿ ತೆರವುಗೊಳಿಸುವ ಜಾಗ ಬಸ್ ನಿಲ್ದಾಣಕ್ಕೆ ಜಾಗ ಒದಗಿಸಬೇಕು. ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಬೇಕು’ ಎಂದು ಆಗ್ರಹಿಸಿದರು.</p>.<p>ಬೀದದ್, ಬಸವಕಲ್ಯಾಣ, ಹುಮನಾಬಾದ್ ಸೇರಿದಂತೆ ನೆರೆಯ ಮಹಾರಾಷ್ಟ್ರ, ತೆಲಂಗಾಣದಿಂದ ಅನೇಕ ಭಕ್ತರು ಕಮಲಾಪುರ ಮಾರ್ಗದಿಂದ ರೇವಣಸಿದ್ದೇಶ್ವರರ ದರ್ಶನಕ್ಕೆ ಆಗಮಿಸುತ್ತಿದ್ದು ಕೂಡಲೇ ಕಮಲಾಪುರ-ರೇವಗ್ಗಿ ರೇವಣಸಿದ್ದೇಶ್ವರ ಗುಡ್ಡಕ್ಕೆ ಬಸ್ ಸಂಚಾರ ಆರಂಭಿಸಬೇಕು. ಅರಣಕಲ್, ರೇವಗ್ಗಿ ಮತ್ತಿತರ ಗ್ರಾಮಗಳು ಕಮಲಾಪುರ ತಾಲ್ಲೂಕಿಗೆ ಸೇರ್ಪಡೆಗೊಂಡಿವೆ. ಮಕ್ಕಳು ಕಮಲಾಪುರ ಶಾಲಾ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. ಕೂಡಲೇ ಬಸ್ ಸಂಚಾರ ಆರಂಭಿಸಬೇಕು ಎಂದರು.</p>.<p>ರಾಷ್ಟ್ರೀಯ ಹೆದ್ದಾರಿ ಮೇಲೆ ವಾಹನಗಳು ಅತಿ ವೇಗದಲ್ಲಿ ಸಂಚರಿಸುತ್ತಿವೆ. ವಾಹನಗಳ ವೇಗ ನಿಯಂತ್ರಿಸಲು ಹಂಪ್ಗಳನ್ನು ಹಾಕಬೇಕು. ಪೊಲೀಸ್ ಠಾಣೆಯಿಂದ ಡಯಟ್ ಕಚೇರಿವರೆಗೆ ಏಕಪಥ ರಸ್ತೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಗ್ರೇಡ್ 2 ತಹಶೀಲ್ದಾರ್ ಶಿವಕುಮಾರ ಶಾಬಾ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಮುಖಂಡರಾದ ವಿಜಯಕುಮಾರ ಪಾಟೀಲ ರಟಕಲ್, ಸಿದ್ದಣಗೌಡ ಅರಣಕಲ್, ದಶರಥ ವಗ್ಗಿ ಮತ್ತಿತರರು ಹಾಜರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>