ಪಟ್ಟಣಕ್ಕೆ ವ್ಯಾಪಾರ ವಹಿವಾಟಿಗಾಗಿ ಸುತ್ತಲಿನ 10 ಗ್ರಾಮಗಳಿಂದ ಜನರು ಬರುತ್ತಾರೆ. ಸಿಮೆಂಟ್ ಕಾರ್ಖಾನೆ ಕಾರ್ಮಿಕರು, ಲಾರಿ ಚಾಲಕರು ಹಾಗೂ ಕ್ಲೀನರ್ಸ್ ಅವರು ವಾರಗಟ್ಟಲೇ ತಂಗುತ್ತಾರೆ. ಕಾಲೇಜು ಹಾಗೂ ಉದ್ಯೋಗಕ್ಕಾಗಿ ವಿದ್ಯಾರ್ಥಿಗಳು ನಿತ್ಯ ಪಟ್ಟಣಕ್ಕೆ ಬರುತ್ತಾರೆ. ಬಡವರಿಗೆ ಕಡಿಮೆ ಹಣದಲ್ಲಿ ಹೊಟ್ಟೆ ತುಂಬಾ ಊಟ ಸಿಗುವ ದೃಷ್ಟಿಯಿಂದ ಈ ಯೋಜನೆ ಆರಂಭಿಸಲಾಗಿದೆ. ಯೋಜನೆ ಸರಿಯಾಗಿ ಸದ್ಬಳಕೆ ಆಗಬೇಕಾದರೆ ಕಾರ್ಮಿಕರು ತಂಗುವ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಬೇಕು. ನೂರಾರು ಬಡವರು, ಕೂಲಿಕಾರ್ಮಿಕರ ಅನುಕೂಲಕ್ಕಾಗಿ ಒತ್ತಾಯಿಸುತ್ತಿದ್ದು, ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.