ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟದ ಬಿತ್ತನೆ ಬೀಜ ಪೂರೈಕೆಗೆ ಮನವಿ

Published 22 ಜೂನ್ 2023, 14:30 IST
Last Updated 22 ಜೂನ್ 2023, 14:30 IST
ಅಕ್ಷರ ಗಾತ್ರ

ಕಲಬುರಗಿ: ರೈತರಿಗೆ ಸೂಕ್ತ ಬೆಲೆಯಲ್ಲಿ ಗುಣಮಟ್ಟದ ಬಿತ್ತನೆ ಬೀಜ ಮತ್ತು ಗೊಬ್ಬರ ಪೂರೈಸಬೇಕೆಂದು ಭಾರತೀಯ ಕಿಸಾನ ಸಂಘ ಕಲಬುರಗಿ ಉತ್ತರ ಪ್ರಾಂತದ ಸದಸ್ಯರು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಳ್ಳುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದು, ರೈತರಿಗೆ ಒಳ್ಳೆಯ ಗುಣಮಟ್ಟದ ಬಿತ್ತನೆ ಬೀಜಗಳನ್ನು ಯೋಗ್ಯ ದರದಲ್ಲಿ ನೀಡಬೇಕು. ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳ ಮಾರಾಟ ತಡೆಯಬೇಕು. ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರ ದೊರೆಯುವಂತೆ ಮಾಡಿ, ಬೆಳೆಗಳ ರೋಗ ಮತ್ತು ಕೀಟ ನಿಯಂತ್ರಣಕ್ಕೆ ಮಾಹಿತಿ ನೀಡಬೇಕು. ಅಲ್ಲದೇ ರೈತರಿಗೆ ಬಾಕಿಯಿರುವ ವಿಮಾ ಹಣವನ್ನು ಶೀಘ್ರ ಬಿಡುಗಡೆಗೊಳಿಸಬೇಕು ಎಂದು ಅಧ್ಯಕ್ಷ ಓಂಪ್ರಕಾಶ ಹೆಬ್ಬಾಳ, ಉಪಾಧ್ಯಕ್ಷ ಶಾಂತಪ್ಪ ಹೊಸಗೌಡ, ಕಾರ್ಯದರ್ಶಿ ಮಲ್ಲಿಕಾರ್ಜುನ ಭೀಮನಳ್ಳಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT