ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಳ್ಳುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದು, ರೈತರಿಗೆ ಒಳ್ಳೆಯ ಗುಣಮಟ್ಟದ ಬಿತ್ತನೆ ಬೀಜಗಳನ್ನು ಯೋಗ್ಯ ದರದಲ್ಲಿ ನೀಡಬೇಕು. ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳ ಮಾರಾಟ ತಡೆಯಬೇಕು. ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರ ದೊರೆಯುವಂತೆ ಮಾಡಿ, ಬೆಳೆಗಳ ರೋಗ ಮತ್ತು ಕೀಟ ನಿಯಂತ್ರಣಕ್ಕೆ ಮಾಹಿತಿ ನೀಡಬೇಕು. ಅಲ್ಲದೇ ರೈತರಿಗೆ ಬಾಕಿಯಿರುವ ವಿಮಾ ಹಣವನ್ನು ಶೀಘ್ರ ಬಿಡುಗಡೆಗೊಳಿಸಬೇಕು ಎಂದು ಅಧ್ಯಕ್ಷ ಓಂಪ್ರಕಾಶ ಹೆಬ್ಬಾಳ, ಉಪಾಧ್ಯಕ್ಷ ಶಾಂತಪ್ಪ ಹೊಸಗೌಡ, ಕಾರ್ಯದರ್ಶಿ ಮಲ್ಲಿಕಾರ್ಜುನ ಭೀಮನಳ್ಳಿ ಮನವಿ ಮಾಡಿದ್ದಾರೆ.