ಮೈಸೂರಿನ ಭಾಗದಿಂದ ಬಂದಂತಹ ಟಿಪ್ಪು ಸುಲ್ತಾನ್, ನಾಲ್ವಡಿ ಕೃಷ್ಣರಾಜ ಒಡೆಯರ ಮತ್ತು ದೇವರಾಜ ಅರಸುರವರು ಮೊದಲಿಗರಾಗಿ ಮೀಸಲಾತಿ ಪದ್ಧತಿಯನ್ನು ಜಾರಿಗೆ ತಂದವರಾಗಿದ್ದಾರೆ. ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಅರಸು ಶಾಸನಾತ್ಮಕ ಮಾನ್ಯತೆಯನ್ನು ಒದಗಿಸಿಕೊಟ್ಟರು. ಅಲ್ಲದೇ, ಅತ್ಯಂತ ಹಿಂದುಳಿದ ಜನಾಂಗಗಳಿಂದ ಬಂದಂತಹ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಸಮಾಜದಲ್ಲಿ ಸೂಕ್ತ ಸ್ಥಾನಮಾನ ಒದಗಿಸುವಲ್ಲಿ ಅನೇಕ ಸಲ ನಿಯಮಗಳನ್ನು ಸಡಿಲಿಸಿ ಅಂತಹ ವ್ಯಕ್ತಿಗಳಿಗೆ ಅನುಕೂಲ ಮಾಡಿ ಕೊಟ್ಟಿದ್ದರು ಎಂದು ತಿಳಿಸಿದರು.