ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸನ್ನತಿಗೆ ನೇರ ಬಸ್ ಸೌಲಭ್ಯಕ್ಕೆ ಆಗ್ರಹ

Last Updated 2 ನವೆಂಬರ್ 2021, 7:45 IST
ಅಕ್ಷರ ಗಾತ್ರ

ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ಶಕ್ತಿಪೀಠ ಸನ್ನತಿಯ ಚಂದ್ರಲಾ ಪರಮೇಶ್ವರಿ ಕ್ಷೇತ್ರಕ್ಕೆ ಕಲಬುರಗಿಯಿಂದ ನೇರವಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜಕುಮಾರ ಪಾಟೀಲ ತೆಲ್ಕೂರ್ ಅವರಿಗೆ ಭಕ್ತರ ನಿಯೋಗದಿಂದ ಮನವಿ ಪತ್ರ ಸಲ್ಲಿಸಲಾಯಿತು.

ಇತಿಹಾಸ ಪ್ರಸಿದ್ಧ ಸನ್ನತಿಗೆ ಬಸ್ ಸೌಲಭ್ಯವೇ ಇಲ್ಲ. ಕೇವಲ ರಾತ್ರಿ ವಸ್ತಿ ಬಸ್ ಬಿಟ್ಟರೆ ಬಸ್ ಸೌಕರ್ಯವೇ ಇಲ್ಲ. ಹೀಗಾಗಿ ಭಕ್ತರ ಅನುಕೂಲಕ್ಕಾಗಿ ಕಲಬುರಗಿ ಕೇಂದ್ರ ಸ್ಥಾನದಿಂದ ಬೆಳಿಗ್ಗೆ 8ಕ್ಕೆ ಬಸ್ ಸಂಚಾರ ಆರಂಭಿಸಬೇಕು ಎಂದು ಕೋರಿದರು.

ಮನವಿಗೆ ಸ್ಪಂದಿಸಿದ ತೆಲ್ಕೂರ ಎರಡು ದಿನಗಳಲ್ಲಿ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಚಂದ್ರಲಾಂಬಾ ಸೇವಾ ಸಮಿತಿ ಅಧ್ಯಕ್ಷ ಬಿಂದುರಾವ್ ಶಿರವಾಳ, ಚಂದ್ರಕಾಂತ ಯರಗೋಳ, ಮೋಹನರಾವ್ ಮಾರಡಗಿ, ವೆಂಕಟೇಶ್ ಮಳ್ಳಿ, ರಾಘವೇಂದ್ರ ಕುಲಕರ್ಣಿ, ಕೊಪ್ರೇಶ ದೇಶಪಾಂಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT