ಕಲಬುರ್ಗಿ: ಇಲ್ಲಿನ ಬುದ್ಧ ವಿಹಾರದಲ್ಲಿ ಅ.25ರಂದು ಆಯೋಜಿಸಿದ್ದ ‘ಧರ್ಮಚಕ್ರ ಪ್ರವರ್ತನ’ ಕಾರ್ಯಕ್ರಮವನ್ನು ಕೊರೊನಾ ಹಿನ್ನೆಲೆಯಲ್ಲಿ ರದ್ದು ಪಡಿಸಲಾಗಿದೆ ಎಂದು ಸಿದ್ಧಾರ್ಥ ವಿಹಾರ ಟ್ರಸ್ಟ್ನ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ನಡೆಯಬೇಕಾಗಿದ್ದ ಸಾಮೂಹಿಕ ಪ್ರಾರ್ಥನೆ, ಧಮ್ಮಪ್ರವಚನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಉಪಾಸಕರು ತಮ್ಮ ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.