<p><strong>ಕಲಬುರ್ಗಿ: </strong>ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿರುವ ಮಹತ್ವದ 400 ಕೃತಿಗಳನ್ನು ಡಿಜಿಟಲೈಸೇಷನ್ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಹೇಳಿದರು.</p>.<p>ನಗರದಲ್ಲಿ ₹17 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಪರಿಷತ್ತಿನ ಕಲಬುರ್ಗಿ ಜಿಲ್ಲಾ ಘಟಕದ ಕನ್ನಡ ಸಭಾ ಭವನವನ್ನು ಗುರುವಾರ ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಈ ಕೆಲಸಕ್ಕೆ ₹75 ಲಕ್ಷ ಮೀಸಲಿರಿಸಲಾಗಿತ್ತು. ಆದರೆ, ಅದನ್ನು ಮೈಸೂರಿನ ಭಾರತೀಯ ಭಾಷಾ ಸಂಸ್ಥಾನ ‘ಭಾರತ ವಾಣಿ’ ಮೂಲಕ ಉಚಿತವಾಗಿ ಮಾಡಿಕೊಡುತ್ತಿದೆ ಎಂದು ಹೇಳಿದರು.</p>.<p>ಈಗಾಗಲೇ ನಿಘಂಟುಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಸಂಕ್ಷಿಪ್ತ ಕನ್ನಡ ನಿಘಂಟುವಿನ ಕೆಲಸ ನಡೆಯುತ್ತಿದೆ. ಒಂದು ವರ್ಷದ ಅವಧಿಯಲ್ಲಿ ಎಲ್ಲ ಕೃತಿಗಳ ಡಿಜಿಟಲೀಕರಣ ಕೆಲಸ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.</p>.<p>ಇಂದಿನ ಯುವಕರು ಪುಸ್ತಕ ಓದುವುದು ಕಡಿಮೆ ಆಗಿದೆ. ಎಲ್ಲರ ಬಳಿ ಸ್ಮಾರ್ಟ್ ಫೋನ್, ಕಂಪ್ಯೂಟರ್ ಇವೆ. ಅವರಲ್ಲಿ ಓದುವ ಅಭಿರುಚಿ ಬೆಳೆಸಲು ಈ ಯೋಜನೆ ರೂಪಿಸಲಾಗಿದೆ ಎಂದರು.</p>.<p>ಶ್ರವಣಬೆಳಗೊಳದಲ್ಲಿ ನಡೆದ ಅಖಿಲ ಭಾರತ ಹಳೆಗನ್ನಡ ಸಾಹಿತ್ಯ ಸಮ್ಮೇಳನದ ಉಪನ್ಯಾಸಗಳನ್ನು ಪುಸ್ತಕ ರೂಪದಲ್ಲಿ ತರಲಾಗುವುದು. ಅದೇ ರೀತಿ ರಾಯಚೂರು, ಮೈಸೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಷಣ ಮತ್ತು ಉಪನ್ಯಾಸಗಳಿಗೆ ಪುಸ್ತಕ ರೂಪ ನೀಡಲಾಗುವುದು ಎಂದು ತಿಳಿಸಿದರು.</p>.<p>ನೇಪಾಳದ ಸಾಂಸ್ಕೃತಿಕ ಸಂಘಟನೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಕರ್ನಾಟಕ ಮತ್ತು ನೇಪಾಳದ 50 ಕವಿಗಳ ಕವನಗಳನ್ನು ಎರಡೂ ಭಾಷೆಗಳಿಗೆ ಅನುವಾದ ಮಾಡಲಾಗುವುದು. ಮೂರ್ನಾಲ್ಕು ತಿಂಗಳಲ್ಲಿ ಅದು ಪೂರ್ಣಗೊಳ್ಳಲಿದೆ ಎಂದು ಹೇಳಿದರು.</p>.<p>ಕಸಾಪ 3.20 ಲಕ್ಷ ಸದಸ್ಯರಿರುವ ಜಗತ್ತಿನ ದೊಡ್ಡ ಸಾಹಿತ್ಯಿಕ ಸಂಸ್ಥೆ. ನಾವು ಜವಾಬ್ದಾರಿ ವಹಿಸಿಕೊಂಡ 19 ತಿಂಗಳಲ್ಲಿ ₹5 ಕೋಟಿ ವೆಚ್ಚದಲ್ಲಿ ಶತಮಾನೋತ್ಸವ ಭವನ ನಿರ್ಮಿಸಲಾಗಿದೆ ಎಂದರು.</p>.<p>ಭಾರತೀಯ ಭಾಷಾ ಸಂಸ್ಥಾನ ಜತೆ ಒಪ್ಪಂದ ಮಾಡಿಕೊಂಡು ಪ್ರತಿ ಜಿಲ್ಲೆಯಲ್ಲಿ ತಲಾ 50 ಶಿಕ್ಷಕರು, ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಯೋಜನೆ ರೂಪಿಸಲಾಗಿದೆ. ಈಗಾಗಲೇ 14 ಜಿಲ್ಲೆಗಳಲ್ಲಿ ಹಳೆಗನ್ನಡ, ಶಾಸನದ ಮಹತ್ವ, ಕೃತಿಗಳ ಕುರಿತು ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.<br /><br />ಕರ್ನಾಟಕ ಲೇಖಕಿಯರ ಸಂಘದ ಸಹಯೋಗದಲ್ಲಿ ಪ್ರತಿ ತಿಂಗಳು ಮಹಿಳಾ ಸಾಧಕಿಯರೊಂದಿಗೆ ಸಂವಾದ ಏರ್ಪಡಿಸಲಾಗುತ್ತಿದೆ. ಸಹಕಾರ ಮಹಾಮಂಡಳದ ಸಹಕಾರದಲ್ಲಿ ಕೃಷಿ ಹಾಗೂ ಸಹಕಾರ ಸಾಹಿತ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗುತ್ತಿದೆ. ಬೀದರ್ನಲ್ಲಿ ನಡೆದ ಸಮಾವೇಶದಲ್ಲಿ 1,500 ರೈತರು ಭಾಗವಹಿಸಿದ್ದು ವಿಶೇಷವಾಗಿತ್ತು ಎಂದು ವಿವರಿಸಿದರು.<br /><br />ಬೆಳಗಾವಿ ಮತ್ತು ಯಾದಗಿರಿಯಲ್ಲಿ ಕನ್ನಡ ಸಭಾ ಭವನ ನಿರ್ಮಿಸಲು ಅನುದಾನ ನೀಡಲಾಗಿದೆ. ಸರ್ಕಾರಿ, ಅನುದಾನಿತ ಶಾಲೆ, ಕಾಲೇಜುಗಳಲ್ಲಿ ಗ್ರಂಥಾಲಯದ ಸೌಲಭ್ಯ ಇದ್ದರೆ 300 ಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು ಎಂದರು.</p>.<p>ಬಹ್ರೇನ್ನಲ್ಲಿ ಮೊದಲ ಬಾರಿಗೆ ಅಂತರರಾಷ್ಟ್ರೀಯ ಸಾಹಿತ್ಯ ಸಮ್ಮೇಳನ ನಡೆಸಲಾಗಿದೆ. ಗೋವಾದಲ್ಲಿ ಕಸಾಪ ಘಟಕ ತೆರೆಯಲಾಗಿದೆ. ಬೃಹತ್ ಮುಂಬೈಗೆ ಜಿಲ್ಲಾ ಘಟಕದ ಸ್ಥಾನಮಾನ ನೀಡಲಾಗಿದೆ ಎಂದರು.</p>.<p>ಮೇಲ್ಮನವಿ ಸಲ್ಲಿಕೆ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಅಧಿಕಾರ ಅವಧಿಯನ್ನು ಮೂರರಿಂದ ಐದು ವರ್ಷಕ್ಕೆ ಏರಿಸುವ ನಿರ್ಣಯವನ್ನು ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಂಘಗಳ ನೋಂದಣಾಧಿಕಾರಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಕರ್ನಾಟಕ ಮೇಲ್ಮನವಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.</p>.<p>ಉಪನಿಬಂಧಕರು 13 ತಿದ್ದುಪಡಿಗಳಲ್ಲಿ 9 ತಿದ್ದುಪಡಿಗಳಿಗೆ ಮಾತ್ರ ಅನುಮೋದನೆ ನೀಡಿದ್ದರು.</p>.<p>ಅಧ್ಯಕ್ಷರ ಅವಧಿ ಏರಿಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಹಿಳೆಯರ ಪ್ರಾತಿನಿದ್ಯ ಹೆಚ್ಚಿಸುವುದಕ್ಕೆ ಅನುಮೋದನೆ ನೀಡಿಲ್ಲ. ಅನುಮೋದನೆ ಸಿಕ್ಕಿದ್ದರೆ ತಲಾ 750 ಜನ ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಮಹಿಳೆಯರಿಗೆ ಪ್ರಾತಿನಿದ್ಯ ಸಿಗುತ್ತಿತ್ತು ಎಂದರು.</p>.<p>ಮೇಲ್ಮನವಿಯಲ್ಲಿ ಏನೇ ತೀರ್ಪು ಬಂದರೂ ಅದನ್ನು ಸ್ವೀಕರಿಸುತ್ತೇವೆ ಎಂದು ತಿಳಿಸಿದರು.</p>.<p>ವೀರಭದ್ರ ಸಿಂಪಿ ಮತ್ತು ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿರುವ ಮಹತ್ವದ 400 ಕೃತಿಗಳನ್ನು ಡಿಜಿಟಲೈಸೇಷನ್ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಹೇಳಿದರು.</p>.<p>ನಗರದಲ್ಲಿ ₹17 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಪರಿಷತ್ತಿನ ಕಲಬುರ್ಗಿ ಜಿಲ್ಲಾ ಘಟಕದ ಕನ್ನಡ ಸಭಾ ಭವನವನ್ನು ಗುರುವಾರ ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಈ ಕೆಲಸಕ್ಕೆ ₹75 ಲಕ್ಷ ಮೀಸಲಿರಿಸಲಾಗಿತ್ತು. ಆದರೆ, ಅದನ್ನು ಮೈಸೂರಿನ ಭಾರತೀಯ ಭಾಷಾ ಸಂಸ್ಥಾನ ‘ಭಾರತ ವಾಣಿ’ ಮೂಲಕ ಉಚಿತವಾಗಿ ಮಾಡಿಕೊಡುತ್ತಿದೆ ಎಂದು ಹೇಳಿದರು.</p>.<p>ಈಗಾಗಲೇ ನಿಘಂಟುಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಸಂಕ್ಷಿಪ್ತ ಕನ್ನಡ ನಿಘಂಟುವಿನ ಕೆಲಸ ನಡೆಯುತ್ತಿದೆ. ಒಂದು ವರ್ಷದ ಅವಧಿಯಲ್ಲಿ ಎಲ್ಲ ಕೃತಿಗಳ ಡಿಜಿಟಲೀಕರಣ ಕೆಲಸ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.</p>.<p>ಇಂದಿನ ಯುವಕರು ಪುಸ್ತಕ ಓದುವುದು ಕಡಿಮೆ ಆಗಿದೆ. ಎಲ್ಲರ ಬಳಿ ಸ್ಮಾರ್ಟ್ ಫೋನ್, ಕಂಪ್ಯೂಟರ್ ಇವೆ. ಅವರಲ್ಲಿ ಓದುವ ಅಭಿರುಚಿ ಬೆಳೆಸಲು ಈ ಯೋಜನೆ ರೂಪಿಸಲಾಗಿದೆ ಎಂದರು.</p>.<p>ಶ್ರವಣಬೆಳಗೊಳದಲ್ಲಿ ನಡೆದ ಅಖಿಲ ಭಾರತ ಹಳೆಗನ್ನಡ ಸಾಹಿತ್ಯ ಸಮ್ಮೇಳನದ ಉಪನ್ಯಾಸಗಳನ್ನು ಪುಸ್ತಕ ರೂಪದಲ್ಲಿ ತರಲಾಗುವುದು. ಅದೇ ರೀತಿ ರಾಯಚೂರು, ಮೈಸೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಷಣ ಮತ್ತು ಉಪನ್ಯಾಸಗಳಿಗೆ ಪುಸ್ತಕ ರೂಪ ನೀಡಲಾಗುವುದು ಎಂದು ತಿಳಿಸಿದರು.</p>.<p>ನೇಪಾಳದ ಸಾಂಸ್ಕೃತಿಕ ಸಂಘಟನೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಕರ್ನಾಟಕ ಮತ್ತು ನೇಪಾಳದ 50 ಕವಿಗಳ ಕವನಗಳನ್ನು ಎರಡೂ ಭಾಷೆಗಳಿಗೆ ಅನುವಾದ ಮಾಡಲಾಗುವುದು. ಮೂರ್ನಾಲ್ಕು ತಿಂಗಳಲ್ಲಿ ಅದು ಪೂರ್ಣಗೊಳ್ಳಲಿದೆ ಎಂದು ಹೇಳಿದರು.</p>.<p>ಕಸಾಪ 3.20 ಲಕ್ಷ ಸದಸ್ಯರಿರುವ ಜಗತ್ತಿನ ದೊಡ್ಡ ಸಾಹಿತ್ಯಿಕ ಸಂಸ್ಥೆ. ನಾವು ಜವಾಬ್ದಾರಿ ವಹಿಸಿಕೊಂಡ 19 ತಿಂಗಳಲ್ಲಿ ₹5 ಕೋಟಿ ವೆಚ್ಚದಲ್ಲಿ ಶತಮಾನೋತ್ಸವ ಭವನ ನಿರ್ಮಿಸಲಾಗಿದೆ ಎಂದರು.</p>.<p>ಭಾರತೀಯ ಭಾಷಾ ಸಂಸ್ಥಾನ ಜತೆ ಒಪ್ಪಂದ ಮಾಡಿಕೊಂಡು ಪ್ರತಿ ಜಿಲ್ಲೆಯಲ್ಲಿ ತಲಾ 50 ಶಿಕ್ಷಕರು, ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಯೋಜನೆ ರೂಪಿಸಲಾಗಿದೆ. ಈಗಾಗಲೇ 14 ಜಿಲ್ಲೆಗಳಲ್ಲಿ ಹಳೆಗನ್ನಡ, ಶಾಸನದ ಮಹತ್ವ, ಕೃತಿಗಳ ಕುರಿತು ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.<br /><br />ಕರ್ನಾಟಕ ಲೇಖಕಿಯರ ಸಂಘದ ಸಹಯೋಗದಲ್ಲಿ ಪ್ರತಿ ತಿಂಗಳು ಮಹಿಳಾ ಸಾಧಕಿಯರೊಂದಿಗೆ ಸಂವಾದ ಏರ್ಪಡಿಸಲಾಗುತ್ತಿದೆ. ಸಹಕಾರ ಮಹಾಮಂಡಳದ ಸಹಕಾರದಲ್ಲಿ ಕೃಷಿ ಹಾಗೂ ಸಹಕಾರ ಸಾಹಿತ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗುತ್ತಿದೆ. ಬೀದರ್ನಲ್ಲಿ ನಡೆದ ಸಮಾವೇಶದಲ್ಲಿ 1,500 ರೈತರು ಭಾಗವಹಿಸಿದ್ದು ವಿಶೇಷವಾಗಿತ್ತು ಎಂದು ವಿವರಿಸಿದರು.<br /><br />ಬೆಳಗಾವಿ ಮತ್ತು ಯಾದಗಿರಿಯಲ್ಲಿ ಕನ್ನಡ ಸಭಾ ಭವನ ನಿರ್ಮಿಸಲು ಅನುದಾನ ನೀಡಲಾಗಿದೆ. ಸರ್ಕಾರಿ, ಅನುದಾನಿತ ಶಾಲೆ, ಕಾಲೇಜುಗಳಲ್ಲಿ ಗ್ರಂಥಾಲಯದ ಸೌಲಭ್ಯ ಇದ್ದರೆ 300 ಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು ಎಂದರು.</p>.<p>ಬಹ್ರೇನ್ನಲ್ಲಿ ಮೊದಲ ಬಾರಿಗೆ ಅಂತರರಾಷ್ಟ್ರೀಯ ಸಾಹಿತ್ಯ ಸಮ್ಮೇಳನ ನಡೆಸಲಾಗಿದೆ. ಗೋವಾದಲ್ಲಿ ಕಸಾಪ ಘಟಕ ತೆರೆಯಲಾಗಿದೆ. ಬೃಹತ್ ಮುಂಬೈಗೆ ಜಿಲ್ಲಾ ಘಟಕದ ಸ್ಥಾನಮಾನ ನೀಡಲಾಗಿದೆ ಎಂದರು.</p>.<p>ಮೇಲ್ಮನವಿ ಸಲ್ಲಿಕೆ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಅಧಿಕಾರ ಅವಧಿಯನ್ನು ಮೂರರಿಂದ ಐದು ವರ್ಷಕ್ಕೆ ಏರಿಸುವ ನಿರ್ಣಯವನ್ನು ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಂಘಗಳ ನೋಂದಣಾಧಿಕಾರಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಕರ್ನಾಟಕ ಮೇಲ್ಮನವಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.</p>.<p>ಉಪನಿಬಂಧಕರು 13 ತಿದ್ದುಪಡಿಗಳಲ್ಲಿ 9 ತಿದ್ದುಪಡಿಗಳಿಗೆ ಮಾತ್ರ ಅನುಮೋದನೆ ನೀಡಿದ್ದರು.</p>.<p>ಅಧ್ಯಕ್ಷರ ಅವಧಿ ಏರಿಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಹಿಳೆಯರ ಪ್ರಾತಿನಿದ್ಯ ಹೆಚ್ಚಿಸುವುದಕ್ಕೆ ಅನುಮೋದನೆ ನೀಡಿಲ್ಲ. ಅನುಮೋದನೆ ಸಿಕ್ಕಿದ್ದರೆ ತಲಾ 750 ಜನ ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಮಹಿಳೆಯರಿಗೆ ಪ್ರಾತಿನಿದ್ಯ ಸಿಗುತ್ತಿತ್ತು ಎಂದರು.</p>.<p>ಮೇಲ್ಮನವಿಯಲ್ಲಿ ಏನೇ ತೀರ್ಪು ಬಂದರೂ ಅದನ್ನು ಸ್ವೀಕರಿಸುತ್ತೇವೆ ಎಂದು ತಿಳಿಸಿದರು.</p>.<p>ವೀರಭದ್ರ ಸಿಂಪಿ ಮತ್ತು ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>