<figcaption>""</figcaption>.<p><strong>ಕಲಬುರ್ಗಿ: </strong>ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಇಟಗಾ ಗ್ರಾಮದಲ್ಲಿ ಭಾನುವಾರ, ಸಾಹಿತಿ- ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ ಅವರು ಸಂತ್ರಸ್ತರೊಂದಿಗೆ ದೀಪಾವಳಿ ಆಚರಿಸಿದರು.</p>.<p>ನಾಗತಿಹಳ್ಳಿಯ ಅಭಿವ್ಯಕ್ತಿ ಸಾಂಸ್ಕೃತಿಕ ವೇದಿಕೆ ಹಾಗೂ ಟೆಂಟ್ ಸಿನಿಮಾ ಶಾಲೆಯ ಆಶ್ರಯದಲ್ಲಿ ಸಂತ್ರಸ್ತರಿಗೆ ಆಹಾರ ಧಾನ್ಯ, ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಿಸಿ, ಸಿಹಿ ಹಂಚಿ ಅವರು ಖುಷಿ ಪಟ್ಟರು.</p>.<p>ಮಕ್ಕಳನ್ನು ಅಕ್ಕರೆಯಿಂದ ಮಾತನಾಡಿಸಿದ ನಾಗತಿಹಳ್ಳಿ ಅವರು, ಮಹಿಳೆಯರನ್ನೂ ಭೇಟಿ ಮಾಡಿ ಅವರ ಸಂಕಷ್ಟ ಆಲಿಸಿದರು.</p>.<p>ನೆಚ್ಚಿನ ಚಲನಚಿತ್ರ ನಿರ್ದೇಶಕರನ್ನು ಕಣ್ತುಂಬಿಕೊಳ್ಳಲು ಹಲವು ಯುವಕ, ಯುವತಿಯರೂ ಸೇರಿದ್ದರು. ನಾಗತಿಹಳ್ಳಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟರು.</p>.<p>ಶನಿವಾರ ಸಂಜೆಯೇ ದೇವಲಗಾಣಗಾಪುರ ಕ್ಷೇತ್ರಕ್ಕೆ ಭೇಟಿ ನೀಡಿದ ನಾಗತಿಹಳ್ಳಿ ಚಂದ್ರಶೇಖರ, ದತ್ತಾತ್ರೇಯ ದರ್ಶನ ಪಡೆದರು.</p>.<div style="text-align:center"><figcaption><strong>ನಾಗತಿಹಳ್ಳಿ ಚಂದ್ರಶೇಖರ ಅವರೊಂದಿಗೆ ದೀಪಾವಳಿ ಆಚರಿಸಲು ಬಂದ ಇಟಗಾ ಗ್ರಾಮಸ್ಥರು</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಕಲಬುರ್ಗಿ: </strong>ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಇಟಗಾ ಗ್ರಾಮದಲ್ಲಿ ಭಾನುವಾರ, ಸಾಹಿತಿ- ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ ಅವರು ಸಂತ್ರಸ್ತರೊಂದಿಗೆ ದೀಪಾವಳಿ ಆಚರಿಸಿದರು.</p>.<p>ನಾಗತಿಹಳ್ಳಿಯ ಅಭಿವ್ಯಕ್ತಿ ಸಾಂಸ್ಕೃತಿಕ ವೇದಿಕೆ ಹಾಗೂ ಟೆಂಟ್ ಸಿನಿಮಾ ಶಾಲೆಯ ಆಶ್ರಯದಲ್ಲಿ ಸಂತ್ರಸ್ತರಿಗೆ ಆಹಾರ ಧಾನ್ಯ, ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಿಸಿ, ಸಿಹಿ ಹಂಚಿ ಅವರು ಖುಷಿ ಪಟ್ಟರು.</p>.<p>ಮಕ್ಕಳನ್ನು ಅಕ್ಕರೆಯಿಂದ ಮಾತನಾಡಿಸಿದ ನಾಗತಿಹಳ್ಳಿ ಅವರು, ಮಹಿಳೆಯರನ್ನೂ ಭೇಟಿ ಮಾಡಿ ಅವರ ಸಂಕಷ್ಟ ಆಲಿಸಿದರು.</p>.<p>ನೆಚ್ಚಿನ ಚಲನಚಿತ್ರ ನಿರ್ದೇಶಕರನ್ನು ಕಣ್ತುಂಬಿಕೊಳ್ಳಲು ಹಲವು ಯುವಕ, ಯುವತಿಯರೂ ಸೇರಿದ್ದರು. ನಾಗತಿಹಳ್ಳಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟರು.</p>.<p>ಶನಿವಾರ ಸಂಜೆಯೇ ದೇವಲಗಾಣಗಾಪುರ ಕ್ಷೇತ್ರಕ್ಕೆ ಭೇಟಿ ನೀಡಿದ ನಾಗತಿಹಳ್ಳಿ ಚಂದ್ರಶೇಖರ, ದತ್ತಾತ್ರೇಯ ದರ್ಶನ ಪಡೆದರು.</p>.<div style="text-align:center"><figcaption><strong>ನಾಗತಿಹಳ್ಳಿ ಚಂದ್ರಶೇಖರ ಅವರೊಂದಿಗೆ ದೀಪಾವಳಿ ಆಚರಿಸಲು ಬಂದ ಇಟಗಾ ಗ್ರಾಮಸ್ಥರು</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>