ಪ್ರಿಯಾಂಕ್ ಖರ್ಗೆ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ 2018ರ ಅಕ್ಟೋಬರ್ 1ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ ನಡೆದಿತ್ತು. 14 ತಿಂಗಳ ಬಳಿಕ ಕೆಡಿಪಿ ಸಭೆ ನಡೆಯುತ್ತಿದೆ. ಗೋವಿಂದ ಕಾರಜೋಳ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಎರಡು ಬಾರಿ ಕೆಡಿಪಿ ಸಭೆ ನಿಗದಿಯಾಗಿತ್ತು. ಒಂದು ಬಾರಿ ಕೆಡಿಪಿ ಸಭೆಯಲ್ಲಿ ಭಾಗವಹಿಸಲು ಸದಸ್ಯರಿಗೆ ನಿಯಮದ ಪ್ರಕಾರ ಏಳು ದಿನಗಳ ಮುಂದೆ ಸಭಾ ಸೂಚನಾ ಪತ್ರ ನೀಡಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮುಂದೂಡಲಾಗಿತ್ತು. ಎರಡನೇ ಬಾರಿ ನವೆಂಬರ್ 8ರಂದು ಸಭೆಯನ್ನು ನಿಗದಿಪಡಿಸಲಾಗಿತ್ತು. ಅಂದು ಅಯೋಧ್ಯೆ ತೀರ್ಪು ಇದ್ದುದರಿಂದ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿತ್ತು. ಹೀಗಾಗಿ, ಕಾರಜೋಳ ಅವರು ಸಭೆಯನ್ನು ನಡೆಸದೇ ವಾಪಸ್ ತೆರಳಿದರು.