ಸೋಮವಾರ, 20 ಅಕ್ಟೋಬರ್ 2025
×
ADVERTISEMENT
ADVERTISEMENT

ಚಿಂಚೋಳಿ | ಜನತಾ ದರ್ಶನ: ಅಹವಾಲುಗಳ ಸುರಿ‘ಮಳೆ’

ಜನಸ್ಪಂದನ ಕಾರ್ಯಕ್ರಮದಲ್ಲಿ 800ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ
Published : 26 ಸೆಪ್ಟೆಂಬರ್ 2023, 6:17 IST
Last Updated : 26 ಸೆಪ್ಟೆಂಬರ್ 2023, 6:17 IST
ಫಾಲೋ ಮಾಡಿ
Comments
ಚಿಂಚೋಳಿಯಲ್ಲಿ ಸೋಮವಾರ ನಡೆದ ಜನತಾ ದರ್ಶನದಲ್ಲಿ ತೆರೆಯಲಾದ ಮಳಿಗೆಗಳಲ್ಲಿ ಅರ್ಜಿಗಳನ್ನು ಸಲ್ಲಿಸಿದ ಸಾರ್ವಜನಿಕರು
ಚಿಂಚೋಳಿಯಲ್ಲಿ ಸೋಮವಾರ ನಡೆದ ಜನತಾ ದರ್ಶನದಲ್ಲಿ ತೆರೆಯಲಾದ ಮಳಿಗೆಗಳಲ್ಲಿ ಅರ್ಜಿಗಳನ್ನು ಸಲ್ಲಿಸಿದ ಸಾರ್ವಜನಿಕರು
ಚಿಂಚೋಳಿಯಲ್ಲಿ ಸೋಮವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಳೆಯಿಂದ ಆಸರೆ ಪಡೆಯಲು ಕುರ್ಚಿಗಳನ್ನು ತಲೆಯ ಮೇಲೆ ಹಿಡಿದು ನಿಂತ ಜನರು
ಚಿಂಚೋಳಿಯಲ್ಲಿ ಸೋಮವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಳೆಯಿಂದ ಆಸರೆ ಪಡೆಯಲು ಕುರ್ಚಿಗಳನ್ನು ತಲೆಯ ಮೇಲೆ ಹಿಡಿದು ನಿಂತ ಜನರು
ಕಲಬುರಗಿ ಕನೆಕ್ಟ್‌ಗೆ ಬಂದ 560 ಅರ್ಜಿಗಳ ಪೈಕಿ 300 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ. ಪೊಲೀಸ್‌ ಠಾಣೆಗಳ ಕ್ಯೂಆರ್ ಕೋಡ್‌ಗೂ 800ಕ್ಕೂ ಹೆಚ್ಚು ಅಭಿಪ್ರಾಯಗಳು ಬಂದಿವೆ
ಪ್ರಿಯಾಂಕ್ ಖರ್ಗೆ ಜಿಲ್ಲಾ ಉಸ್ತುವಾರಿ ಸಚಿವ
‘ಜನರ ಸಮಸ್ಯೆಗಳ ಇತ್ಯರ್ಥಕ್ಕೆ 24 ತಾಸು ಕೆಲಸ ಮಾಡಬೇಕು’
‘ತಿಂಗಳಿಗೆ ಒಮ್ಮೆ ಜನಸ್ಪಂದನೆ ಕಾರ್ಯಕ್ರಮ ಆಯೋಜಿಸಿದರೆ ಸಾಲದು. ಸರ್ಕಾರವೇ ಜನರ ಬಳಿಗೆ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡಲು 24 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಜನತಾ ದರ್ಶನ ಉದ್ಘಾಟಿಸಿ ಮಾತನಾಡಿದ ಅವರು ‘ಎಲ್ಲರಿಗೂ ಶಾಸಕರ ಸಚಿವರ ಮನೆ ಬಾಗಿಲಿಗೆ ಕಲಬುರಗಿ ಬೆಂಗಳೂರಿಗೆ ಹೋಗುವ ಶಕ್ತಿ ಇರುವುದಿಲ್ಲ. ಅಂತಹ ಜನರ ಬಳಿಗೆ ಸರ್ಕಾರವೇ ಹೋಗಬೇಕಾಗುತ್ತದೆ’ ಎಂದರು.‌ ‘ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ವಸತಿ ಸಹಿತ ನಾಗಾವಿ ಇನ್‌ಸ್ಟಿಟ್ಯೂಟ್ ಫಾರ್ ಕಾಂಪಿಟೇಟಿವ್ ಎಕ್ಸಾಮ್ಸ್‌(ನೈಸ್ ಅಕಾಡೆಮಿ) ಸ್ಥಾಪಿಸಲಾಗುವುದು. ಒಂದು ತಿಂಗಳಲ್ಲಿ ಮೇಲ್ದರ್ಜೆಗೆ ಏರಿಸಿದ 100 ಗ್ರಂಥಾಲಯಗಳನ್ನು ಸಹ ಉದ್ಘಾಟಿಸಲಾಗುವುದು’ ಎಂದು ಹೇಳಿದರು. ‘ಮಹಿಳೆಯರಿಗಾಗಿ 400 ಹೈಟೆಕ್‌ ಶೌಚಾಲಯಗಳನ್ನು ನಿರ್ಮಿಸಿ ಅವುಗಳ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿಗೆ ವಹಿಸಲಾಗುವುದು. ಸಾರ್ವಜನಿಕರು ಸಹ ಸರ್ಕಾರದ ಯೋಜನೆಗಳಿಗೆ ಬೆಂಬಲಿಸಿ ಕೈಜೋಡಿಸಿದ್ದೇಯಾದರೆ ಉತ್ತಮವಾದ ಆಡಳಿತ ಕೊಟ್ಟು ಪ್ರತಿಯೊಂದು ಯೋಜನೆಯನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡುತ್ತೇನೆ’ ಎಂದರು
ಪರಸ್ಪರ ಕಾಲೆಳೆದ ಕಮಕನೂರ– ಡಾ. ಅವಿನಾಶ
ಭಾಷಣದ ವೇಳೆ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಹಾಗೂ ಶಾಸಕ ಡಾ. ಅವಿನಾಶ ಜಾಧವ ಅವರು ಪರಸ್ಪರ ಕಾಲೆಳದು ಲೇವಡಿ ಮಾಡಿದರು. ‘ಸಿ.ಎಂ ಸಿದ್ದರಾಮಯ್ಯ ಅವರಂತೆ ನಮ್ಮ ಭಾಗದಲ್ಲಿ ಪ್ರಿಯಾಂಕ್ ಖರ್ಗೆ ಅವರ ಗಾಳಿ ಬೀಸುತ್ತಿದೆ. ಅವರಿಂದಾಗಿಯೇ ದಶಕದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿದೆ. ಏನಾದರು ಸಮಸ್ಯೆ ಇದ್ದರೆ ಶಾಸಕರು ಸಚಿವರ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬಹುದು’ ಎಂದು ತಿಪ್ಪಣ್ಣಪ್ಪ ಅವರು ವ್ಯಂಗ್ಯವಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಾ. ಅವಿನಾಶ ಜಾಧವ ಅವರು ‘ನಮ್ಮ ಸರ್ಕಾರದ ಅವಧಿಯಲ್ಲಿ ಚಿಂಚೋಳಿಗೆ ಅತಿ ಹೆಚ್ಚು ಅನುದಾನ ತಂದಿದ್ದೇನೆ. ಯಾವುದೇ ಸರ್ಕಾರ ಇದ್ದರೂ ಜನರ ಹಿತದೃಷ್ಟಿಯಿಂದ ನಡೆದುಕೊಳ್ಳಬೇಕು. ಇಂತಹ ಕಾರ್ಯಕ್ರಮಗಳ ಮೂಲಕ ಜನರಿಗೆ ಒಳ್ಳೆಯ ಸಂದೇಶ ಹೋಗಲಿ’ ಎಂದರು.
ಶಿಷ್ಟಾಚಾರ ಉಲ್ಲಂಘನೆ
ಜಿಲ್ಲಾಡಳಿತ ಆಯೋಜಿಸಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ಮುಖಂಡರು ವೇದಿಕೆಯ ಮೇಲೆ ಕುಳಿತಿದ್ದರು. ಕಾಂಗ್ರೆಸ್ ಮುಖಂಡರಾದ ಸುಭಾಷ ರಾಠೋಡ ರಾಜೇಶ ಗುತ್ತೇದಾರ ದೀಪಕ್ ನಾಗ್ ಪುಣ್ಯಶೆಟ್ಟಿ ಭೀಮರಾವ್ ಟಿ.ಟಿ ಬಸಯ್ಯ ಗುತ್ತೇದಾರ ಬಸವರಾಜ ಪಾಟೀಲ ಹೇರೂರು ಬಸವರಾಜ ಮಾಲಿ ಬಿಜೆಪಿ ಮುಖಂಡರಾದ ಗೌತಮ ಪಾಟೀಲ ಕೆ.ಎಂ.ಬಾರಿ ಸಂತೋಷ ಗಣಂತಿ ಅವರು ವೇದಿಕೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಿಷ್ಟಾಚಾರ ಉಲ್ಲಂಘಿಸಿದರು.
15ಕ್ಕೂ ಅಧಿಕ ಮಳಿಗೆ ಸ್ಥಾಪನೆ
ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಗ್ರಾಮೀಣಾಭಿವೃದ್ಧಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಅರಣ್ಯ ಜಿಲ್ಲಾ ಪೊಲೀಸ್ ಕೃಷಿ ಜಿಲ್ಲಾ ನಗರಾಭಿವೃದ್ಧಿ ಕೋಶ ಕಂದಾಯ ಮೀನುಗಾರಿಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿ 15ಕ್ಕೂ ಅಧಿಕ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ಪಡಿತರ ‌ಚೀಟಿ ತಿದ್ದುಪಡಿ ಆಧಾರ್ ಕೆವೈಸಿ ಮತದಾರರ ಗುರುತಿನ ಚೀಟಿ ಗೃಹಜ್ಯೋತಿ ಗೃಹಲಕ್ಷ್ಮಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಜೆಸ್ಕಾಂ ಬ್ಯಾಂಕ್ ಸಾಲ ಸೌಲಭ್ಯ ಸೇರಿದಂತೆ ಇನ್ನಿತರ ಯೋಜನೆಗಳ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಿಬ್ಬಂದಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕೆಲವು ಅರ್ಜಿಗಳಿಗೆ ಸ್ಥಳದಲ್ಲೇ ಇತ್ಯರ್ಥಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT