ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 2022–23ನೇ ಸಾಲಿನ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ‘ಕ್ರೀಡಾಭಿವೃದ್ಧಿಗೆ ಸಂಬಂಧಿಸಿದಂತೆ ಈಗಾಗಲೇ ಕೆಕೆಆರ್ಡಿಬಿ ಅಧ್ಯಕ್ಷರು ಮತ್ತು ಆಯುಕ್ತರ ಜೊತೆ ಚರ್ಚಿಸಲಾಗಿದ್ದು, ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೇ ಟೆನಿಸ್ ಅಂಗಣದ ಅಭಿವೃದ್ಧಿಗೆ ₹ 34 ಲಕ್ಷ ಮತ್ತು ಬ್ಯಾಡ್ಮಿಂಟನ್ ಅಂಗಣದ ಅಭಿವೃದ್ಧಿಗೆ ₹ 64 ಲಕ್ಷ ಅನುದಾನಕ್ಕೆ ಅನುಮತಿ ಸಿಕ್ಕಿದೆ’ ಎಂದರು.