<p><strong>ಕಲಬುರಗಿ:</strong> ನಗರದ ಹಳೇ ಜೇವರ್ಗಿ ರಸ್ತೆಯಲ್ಲಿರುವ ಸಾಮಾಜಿಕ ಕಾರ್ಯಕರ್ತೆ ಹಾಗೂ ಪಿಎಸ್ಐ ಹಗರಣ ಪ್ರಕರಣದ ಆರೋಪಿ ದಿವ್ಯಾ ಹಾಗರಗಿ ಮನೆ ಮೇಲೆ ಕಲಬುರಗಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p>.ದಿವ್ಯಾ ಹಾಗರಗಿ– ಉಮೇಶ್ ಜಾಧವ್ ನಂಟಿನ ತನಿಖೆಗೆ ಕಾಂಗ್ರೆಸ್ ಆಗ್ರಹ.<p>ಮನೆಯಲ್ಲಿ ಗುಂಪು ಸೇರಿಕೊಂಡು ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p><p>'ಮನೆಯಲ್ಲೆ ಅಡ್ಡೆ ಮಾಡಿಕೊಂಡು ಇಸ್ಪೀಟ್ ಜೂಜಾಟ ನಡೆಸಲಾಗುತ್ತಿತ್ತು. ಕೆಲ ಸರ್ಕಾರಿ ಅಧಿಕಾರಿಗಳು ಸೇರಿ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳದಿಂದ ₹42 ಸಾವಿರ ಜಪ್ತಿ ಮಾಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.</p>.ಪಿಎಸ್ಐ ನೇಮಕಾತಿ ಅಕ್ರಮ: ಮುಖ್ಯ ಶಿಕ್ಷಕನತ್ತ ಬೊಟ್ಟು ಮಾಡಿದ ದಿವ್ಯಾ ಹಾಗರಗಿ.<p>ದಿವ್ಯಾ ಹಾಗರಗಿ, ರಾಜು ಲೆಂಗಟಿ, ಶಿವಶರಣಪ್ಪ ಮಶಾಳ, ರವೀಂದ್ರ ಮಾನಕರ, ಭಗವಾನ ಜಾಕೋರಿ, ಮಲ್ಲಿನಾಥ ಮಂಗಲಗಿ, ಸಂಗಮೇಶ ನಾಗನಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಜೂಜಾಟ ಕುರಿತು ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ಹಳೇ ಜೇವರ್ಗಿ ರಸ್ತೆಯಲ್ಲಿರುವ ಸಾಮಾಜಿಕ ಕಾರ್ಯಕರ್ತೆ ಹಾಗೂ ಪಿಎಸ್ಐ ಹಗರಣ ಪ್ರಕರಣದ ಆರೋಪಿ ದಿವ್ಯಾ ಹಾಗರಗಿ ಮನೆ ಮೇಲೆ ಕಲಬುರಗಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p>.ದಿವ್ಯಾ ಹಾಗರಗಿ– ಉಮೇಶ್ ಜಾಧವ್ ನಂಟಿನ ತನಿಖೆಗೆ ಕಾಂಗ್ರೆಸ್ ಆಗ್ರಹ.<p>ಮನೆಯಲ್ಲಿ ಗುಂಪು ಸೇರಿಕೊಂಡು ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p><p>'ಮನೆಯಲ್ಲೆ ಅಡ್ಡೆ ಮಾಡಿಕೊಂಡು ಇಸ್ಪೀಟ್ ಜೂಜಾಟ ನಡೆಸಲಾಗುತ್ತಿತ್ತು. ಕೆಲ ಸರ್ಕಾರಿ ಅಧಿಕಾರಿಗಳು ಸೇರಿ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳದಿಂದ ₹42 ಸಾವಿರ ಜಪ್ತಿ ಮಾಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.</p>.ಪಿಎಸ್ಐ ನೇಮಕಾತಿ ಅಕ್ರಮ: ಮುಖ್ಯ ಶಿಕ್ಷಕನತ್ತ ಬೊಟ್ಟು ಮಾಡಿದ ದಿವ್ಯಾ ಹಾಗರಗಿ.<p>ದಿವ್ಯಾ ಹಾಗರಗಿ, ರಾಜು ಲೆಂಗಟಿ, ಶಿವಶರಣಪ್ಪ ಮಶಾಳ, ರವೀಂದ್ರ ಮಾನಕರ, ಭಗವಾನ ಜಾಕೋರಿ, ಮಲ್ಲಿನಾಥ ಮಂಗಲಗಿ, ಸಂಗಮೇಶ ನಾಗನಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಜೂಜಾಟ ಕುರಿತು ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>