ದತ್ರಾತ್ರೇಯ ದೇವರ ದರ್ಶನ ಪಡೆದ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಈ ಭಾಗದಲ್ಲಿ ದೇವಲ ಗಾಣಗಾಪುರ ದತ್ತ ಮಹಾರಾಜರ ದೇವಸ್ಥಾನ ಪವಿತ್ರವಾಗಿದ್ದು, ಅಪಾರ ಭಕ್ತರನ್ನು ಹೊಂದಿದ್ದಾರೆ. ಅದಕ್ಕಾಗಿ ಈ ದೇವಸ್ಥಾನವನ್ನು ಅಭಿವೃದ್ಧಿ ಮಾಡಲಾಗುವುದು. ತಾವೆಲ್ಲಾ ಅರ್ಚಕರು ನಾನು ಮುಖ್ಯಮಂತ್ರಿ ಆಗಿ ಬರಬೇಕೆಂದು ಆಶೀರ್ವಾದ ನೀಡಿ ಸನ್ಮಾನ ಮಾಡಿದ್ದೀರಿ. ದತ್ತಾತ್ರೇಯ ಮಹಾರಾಜರ ಆಶೀರ್ವಾದದಿಂದ ಮುಖ್ಯಮಂತ್ರಿಯಾದರೆ ಮತ್ತೊಮ್ಮೆ ದೇವಸ್ಥಾನಕ್ಕೆ ಬರುತ್ತೇನೆ’ ಎಂದು ಹೇಳಿದರು.