<p><strong>ಕಲಬುರಗಿ</strong>: 'ನಾವು ಸಂಚರಿಸುವಾಗ ಸಾರ್ವಜನಿಕರ ವಾಹನ ಸಂಚಾರಕ್ಕೆ ತಡೆ ಮಾಡಬೇಡಿ' ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ ಶರಣಪ್ರಕಾಶ ಪಾಟೀಲ ಪೊಲೀಸರಿಗೆ ಸೂಚಿಸಿದರು.</p><p>ಕಲಬುರಗಿಯಲ್ಲಿ ಶನಿವಾರ ಪೊಲೀಸ್ ಕಮಿಷನರ್ ಹಾಗೂ ಎಸ್ಪಿ ಅವರೊಂದಿಗೆ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕುರಿತಂತೆ ಮಾಹಿತಿ ಪಡೆದುಕೊಂಡ ಸಚಿವರು, ತಮ್ಮ ಬೆಂಗಾವಲು ಪಡೆಯ ಸಂಚಾರಕ್ಕಾಗಿ ಯಾವುದೇ ರೀತಿಯಲ್ಲೂ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಅಡ್ಡಿ ಅಥವಾ ನಿರ್ಬಂಧ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.</p><p>ಸಚಿವರ ಅಥವಾ ಯಾವುದೇ ಜನಪ್ರತಿನಿಧಿಗಳ ಓಡಾಟ ಸಾರ್ವಜನಿಕರ ಓಡಾಟಕ್ಕೆ ಅನಗತ್ಯ ವಿಳಂಬ ಉಂಟು ಮಾಡುವುದು ಸಮಂಜಸವಲ್ಲ. ಈ ನಿಟ್ಟಿನಲ್ಲಿ ಜೀರೋ ಟ್ರಾಫಿಕ್ ಅಥವಾ ತಡೆ ಮಾಡದಂತೆ ಅಧಿಕಾರಿಗಳಿಗೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: 'ನಾವು ಸಂಚರಿಸುವಾಗ ಸಾರ್ವಜನಿಕರ ವಾಹನ ಸಂಚಾರಕ್ಕೆ ತಡೆ ಮಾಡಬೇಡಿ' ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ ಶರಣಪ್ರಕಾಶ ಪಾಟೀಲ ಪೊಲೀಸರಿಗೆ ಸೂಚಿಸಿದರು.</p><p>ಕಲಬುರಗಿಯಲ್ಲಿ ಶನಿವಾರ ಪೊಲೀಸ್ ಕಮಿಷನರ್ ಹಾಗೂ ಎಸ್ಪಿ ಅವರೊಂದಿಗೆ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕುರಿತಂತೆ ಮಾಹಿತಿ ಪಡೆದುಕೊಂಡ ಸಚಿವರು, ತಮ್ಮ ಬೆಂಗಾವಲು ಪಡೆಯ ಸಂಚಾರಕ್ಕಾಗಿ ಯಾವುದೇ ರೀತಿಯಲ್ಲೂ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಅಡ್ಡಿ ಅಥವಾ ನಿರ್ಬಂಧ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.</p><p>ಸಚಿವರ ಅಥವಾ ಯಾವುದೇ ಜನಪ್ರತಿನಿಧಿಗಳ ಓಡಾಟ ಸಾರ್ವಜನಿಕರ ಓಡಾಟಕ್ಕೆ ಅನಗತ್ಯ ವಿಳಂಬ ಉಂಟು ಮಾಡುವುದು ಸಮಂಜಸವಲ್ಲ. ಈ ನಿಟ್ಟಿನಲ್ಲಿ ಜೀರೋ ಟ್ರಾಫಿಕ್ ಅಥವಾ ತಡೆ ಮಾಡದಂತೆ ಅಧಿಕಾರಿಗಳಿಗೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>