<p><strong>ಕಲಬುರ್ಗಿ:</strong> ‘ಸರ್ಕಾರ ಯಾವುದೇ ಬೆಳೆಗೆ ನಿಗದಿ ಮಾಡಿದ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ವ್ಯಾಪಾರಿಗಳು ಖರೀದಿ ಮಾಡಬಾರದು. ಆಗ ಮಾತ್ರ ರೈತ ಸಮುದಾಯಕ್ಕೆ ನ್ಯಾಯ ಒದಗಿಸಲು ಸಾಧ್ಯ’ ಎಂದು ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಟಿ.ಎನ್. ಪ್ರಕಾಶ ಕಮ್ಮರಡಿ ಹೇಳಿದರು.</p>.<p>ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಆಹಾರಧಾನ್ಯ ವ್ಯಾಪಾರಿಗಳ ಸಂಘ, ಗುಲಬರ್ಗಾ ದಾಲ್ ಮಿಲ್ಸ್ ಆಶ್ರಯದಲ್ಲಿ ನಗರದಲ್ಲಿ ಶುಕ್ರವಾರ ನಡೆದ ‘ಉತ್ತರ ಕರ್ನಾಟಕ ಎಪಿಎಂಸಿ ವರ್ತಕರು ಹಾಗೂ ರೈತರ ‘ಭಾವಾಂತರ ಯೋಜನೆ ಸಮಾವೇಶ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರ ಮಾತ್ರ ರೈತರನ್ನು ಕಾಪಾಡುವ ಜವಾಬ್ದಾರಿ ಹೊರಬೇಕು ಎಂಬ ಮನಸ್ಥಿತಿ ಸರಿಯಲ್ಲ. ಇದರಲ್ಲಿ ವ್ಯಾಪಾರಿಗಳ ಪಾಲೂ ಇದೆ. ಬೆಂಬಲ ಬೆಲೆಗಿಂತ ಹೆಚ್ಚಿನ ದರ ನೀಡಿ ಕೃಷಿ ಉತ್ಪನ್ನ ಖರೀದಿಸುವುದು ಸಾಧ್ಯವಿದೆ’ ಎಂದರು.</p>.<p>‘ಎಪಿಎಂಸಿ ವರ್ತಕರು ಬೆಂಬಲ ಬೆಲೆಯಷ್ಟೇ ದರದಲ್ಲಿ ಕೃಷಿ ಉತ್ಪನ್ನ ಖರೀದಿ ಮಾಡಲು ಮುಂದೆಬಂದರೆ ಕೇಂದ್ರ ಸರ್ಕಾರ ಶೇ 15ರಷ್ಟು ಕಮೀಷನ್ ನೀಡುತ್ತದೆ’ ಎಂದೂ ಅವರು ಮಾಹಿತಿ ನೀಡಿದರು.</p>.<p>‘ರೈತರಷ್ಟೇ ಸಮಸ್ಯೆಗಳು ಕೃಷಿ ಮಾರುಕಟ್ಟೆ ವ್ಯಾಪಾರಿಗಳಿಗೂ ಇವೆ. ಈ ಇಬ್ಬರ ಸಮಸ್ಯೆಗಳನ್ನು ಒಟ್ಟೊಟ್ಟಿಗೇ ಬಗೆಹರಿಸುವ ಪ್ರಯತ್ನ ಮಾಡಬೇಕು ಎಂಬುದು ನನ್ನ ಗಮನಕ್ಕೆ ಬಂದಿದೆ. ಇಲ್ಲದಿದ್ದರೆ ಒಬ್ಬರಿಗೆ ಲಾಭ ಮಾಡುವ ಭರದಲ್ಲಿ ಇನ್ನೊಬ್ಬರಿಗೆ ಹಾನಿ ಆಗುವ ಸಾಧ್ಯತೆ ಇದೆ. ಈ ವಿಚಾರವನ್ನು ಸರ್ಕಾರಕ್ಕೆ ಮನವರಿಕೆ ಮಾಡುತ್ತೇನೆ’ ಎಂದು ಅವರು ಭರವಸೆ ನೀಡಿದರು.</p>.<p>‘ಹೈದರಾಬಾದ್ ಕರ್ನಾಟಕ ಭಾಗದಲ್ಲಿ ದ್ವಿದಳ ಧಾನ್ಯ ಬೆಳೆಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಇನ್ನೊಂದೆಡೆ ವರ್ತಕರು ಹಾಗೂ ದಾಲ್ ಮಿಲ್ ಮಾಲೀಕರೂ ಹಾನಿ ಅನುಭವಿಸುತ್ತಿದ್ದಾರೆ. ಇದರ ಪರಿಹಾರಕ್ಕೆ ಸೂಕ್ತ ಮಾರ್ಗೋಪಾಯ ಕಂಡುಕೊಳ್ಳಬೇಕು. ಶೀಘ್ರದಲ್ಲೇ ಮತ್ತೊಮ್ಮೆ ಸಭೆ ಕರೆದು ಚರ್ಚಿಸುತ್ತೇನೆ’ ಎಂದರು.</p>.<p>ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಬಸವರಾಜ ಜವಳಿ, ದಾಲ್ಮಿಲ್ಸ್ ಅಧ್ಯಕ್ಷ ಚಿದಂಬರರಾವ ಪಾಟೀಲ, ವಿವಿಧ ವರ್ತಕರ ಸಂಘಗಳ ಮುಖಂಡರಾದ ಎಸ್.ಎಸ್.ಪಾಟೀಲ, ಸೋಮನಾಥ ಜೈನ್, ಶಂಕರಣ್ಣ ಗದ್ದಿಕೇರಿ, ಬಸವರಾಜ, ಶ್ರೀಮಂತ ಮಾತನಾಡಿದರು.</p>.<p class="Briefhead"><strong>ಈಗ ಯಾವ ಸರ್ಕಾರವೂ ಇಲ್ಲ..!</strong></p>.<p>‘ರಾಜ್ಯ ಹಾಗೂ ಕೇಂದ್ರದಲ್ಲಿ ಈಗ ಯಾವ ಸರ್ಕಾರ ಅಸ್ತಿತ್ವದಲ್ಲಿದೆ? ಖರೇ ಹೇಳಬೇಕೆಂದರೆ ಯಾರ ಸರ್ಕಾರವೂ ಇಲ್ಲ. ಈಗಿರುವುದು ಲೋಕಸಭೆ ಚುನಾವಣೆಯ ತಾಲೀಮು ತಂಡಗಳು ಮಾತ್ರ...’</p>.<p>ಹೀಗೆಂದು ಲೇವಡಿ ಮಾಡಿದ್ದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ.ಶೆಟಗಾರ. ‘ಈಗ ಎಲ್ಲರಿಗೂ ಮತಗಳ ಅವಶ್ಯಕತೆ ಹೆಚ್ಚಾಗಿದೆ. ಕಬ್ಬಿಣ ಕಾದಿದೆ, ಈಗಲೇ ಹೊಡಿದರೆ ಮಣಿಯುತ್ತದೆ...’ ಎಂದು ಅವರು ಹಾಸ್ಯ ಚಟಾಕಿ ಹಾರಿಸಿದರು.</p>.<p>‘ನಮ್ಮ ಭಾಗದ ರೈತರು, ವ್ಯಾಪಾರಿಗಳು ಸೇರಿಕೊಂಡು 50 ಶಾಸಕರ ಮುಂದಾಳತ್ವದಲ್ಲಿ ಒಮ್ಮೆ ವಿಧಾನಸಭೆಗೆ ಹೋಗಿ. ಆಗ ಸರ್ಕಾರಕ್ಕೆ ಬಿಸಿ ಮುಟ್ಟುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ‘ಸರ್ಕಾರ ಯಾವುದೇ ಬೆಳೆಗೆ ನಿಗದಿ ಮಾಡಿದ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ವ್ಯಾಪಾರಿಗಳು ಖರೀದಿ ಮಾಡಬಾರದು. ಆಗ ಮಾತ್ರ ರೈತ ಸಮುದಾಯಕ್ಕೆ ನ್ಯಾಯ ಒದಗಿಸಲು ಸಾಧ್ಯ’ ಎಂದು ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಟಿ.ಎನ್. ಪ್ರಕಾಶ ಕಮ್ಮರಡಿ ಹೇಳಿದರು.</p>.<p>ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಆಹಾರಧಾನ್ಯ ವ್ಯಾಪಾರಿಗಳ ಸಂಘ, ಗುಲಬರ್ಗಾ ದಾಲ್ ಮಿಲ್ಸ್ ಆಶ್ರಯದಲ್ಲಿ ನಗರದಲ್ಲಿ ಶುಕ್ರವಾರ ನಡೆದ ‘ಉತ್ತರ ಕರ್ನಾಟಕ ಎಪಿಎಂಸಿ ವರ್ತಕರು ಹಾಗೂ ರೈತರ ‘ಭಾವಾಂತರ ಯೋಜನೆ ಸಮಾವೇಶ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರ ಮಾತ್ರ ರೈತರನ್ನು ಕಾಪಾಡುವ ಜವಾಬ್ದಾರಿ ಹೊರಬೇಕು ಎಂಬ ಮನಸ್ಥಿತಿ ಸರಿಯಲ್ಲ. ಇದರಲ್ಲಿ ವ್ಯಾಪಾರಿಗಳ ಪಾಲೂ ಇದೆ. ಬೆಂಬಲ ಬೆಲೆಗಿಂತ ಹೆಚ್ಚಿನ ದರ ನೀಡಿ ಕೃಷಿ ಉತ್ಪನ್ನ ಖರೀದಿಸುವುದು ಸಾಧ್ಯವಿದೆ’ ಎಂದರು.</p>.<p>‘ಎಪಿಎಂಸಿ ವರ್ತಕರು ಬೆಂಬಲ ಬೆಲೆಯಷ್ಟೇ ದರದಲ್ಲಿ ಕೃಷಿ ಉತ್ಪನ್ನ ಖರೀದಿ ಮಾಡಲು ಮುಂದೆಬಂದರೆ ಕೇಂದ್ರ ಸರ್ಕಾರ ಶೇ 15ರಷ್ಟು ಕಮೀಷನ್ ನೀಡುತ್ತದೆ’ ಎಂದೂ ಅವರು ಮಾಹಿತಿ ನೀಡಿದರು.</p>.<p>‘ರೈತರಷ್ಟೇ ಸಮಸ್ಯೆಗಳು ಕೃಷಿ ಮಾರುಕಟ್ಟೆ ವ್ಯಾಪಾರಿಗಳಿಗೂ ಇವೆ. ಈ ಇಬ್ಬರ ಸಮಸ್ಯೆಗಳನ್ನು ಒಟ್ಟೊಟ್ಟಿಗೇ ಬಗೆಹರಿಸುವ ಪ್ರಯತ್ನ ಮಾಡಬೇಕು ಎಂಬುದು ನನ್ನ ಗಮನಕ್ಕೆ ಬಂದಿದೆ. ಇಲ್ಲದಿದ್ದರೆ ಒಬ್ಬರಿಗೆ ಲಾಭ ಮಾಡುವ ಭರದಲ್ಲಿ ಇನ್ನೊಬ್ಬರಿಗೆ ಹಾನಿ ಆಗುವ ಸಾಧ್ಯತೆ ಇದೆ. ಈ ವಿಚಾರವನ್ನು ಸರ್ಕಾರಕ್ಕೆ ಮನವರಿಕೆ ಮಾಡುತ್ತೇನೆ’ ಎಂದು ಅವರು ಭರವಸೆ ನೀಡಿದರು.</p>.<p>‘ಹೈದರಾಬಾದ್ ಕರ್ನಾಟಕ ಭಾಗದಲ್ಲಿ ದ್ವಿದಳ ಧಾನ್ಯ ಬೆಳೆಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಇನ್ನೊಂದೆಡೆ ವರ್ತಕರು ಹಾಗೂ ದಾಲ್ ಮಿಲ್ ಮಾಲೀಕರೂ ಹಾನಿ ಅನುಭವಿಸುತ್ತಿದ್ದಾರೆ. ಇದರ ಪರಿಹಾರಕ್ಕೆ ಸೂಕ್ತ ಮಾರ್ಗೋಪಾಯ ಕಂಡುಕೊಳ್ಳಬೇಕು. ಶೀಘ್ರದಲ್ಲೇ ಮತ್ತೊಮ್ಮೆ ಸಭೆ ಕರೆದು ಚರ್ಚಿಸುತ್ತೇನೆ’ ಎಂದರು.</p>.<p>ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಬಸವರಾಜ ಜವಳಿ, ದಾಲ್ಮಿಲ್ಸ್ ಅಧ್ಯಕ್ಷ ಚಿದಂಬರರಾವ ಪಾಟೀಲ, ವಿವಿಧ ವರ್ತಕರ ಸಂಘಗಳ ಮುಖಂಡರಾದ ಎಸ್.ಎಸ್.ಪಾಟೀಲ, ಸೋಮನಾಥ ಜೈನ್, ಶಂಕರಣ್ಣ ಗದ್ದಿಕೇರಿ, ಬಸವರಾಜ, ಶ್ರೀಮಂತ ಮಾತನಾಡಿದರು.</p>.<p class="Briefhead"><strong>ಈಗ ಯಾವ ಸರ್ಕಾರವೂ ಇಲ್ಲ..!</strong></p>.<p>‘ರಾಜ್ಯ ಹಾಗೂ ಕೇಂದ್ರದಲ್ಲಿ ಈಗ ಯಾವ ಸರ್ಕಾರ ಅಸ್ತಿತ್ವದಲ್ಲಿದೆ? ಖರೇ ಹೇಳಬೇಕೆಂದರೆ ಯಾರ ಸರ್ಕಾರವೂ ಇಲ್ಲ. ಈಗಿರುವುದು ಲೋಕಸಭೆ ಚುನಾವಣೆಯ ತಾಲೀಮು ತಂಡಗಳು ಮಾತ್ರ...’</p>.<p>ಹೀಗೆಂದು ಲೇವಡಿ ಮಾಡಿದ್ದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ.ಶೆಟಗಾರ. ‘ಈಗ ಎಲ್ಲರಿಗೂ ಮತಗಳ ಅವಶ್ಯಕತೆ ಹೆಚ್ಚಾಗಿದೆ. ಕಬ್ಬಿಣ ಕಾದಿದೆ, ಈಗಲೇ ಹೊಡಿದರೆ ಮಣಿಯುತ್ತದೆ...’ ಎಂದು ಅವರು ಹಾಸ್ಯ ಚಟಾಕಿ ಹಾರಿಸಿದರು.</p>.<p>‘ನಮ್ಮ ಭಾಗದ ರೈತರು, ವ್ಯಾಪಾರಿಗಳು ಸೇರಿಕೊಂಡು 50 ಶಾಸಕರ ಮುಂದಾಳತ್ವದಲ್ಲಿ ಒಮ್ಮೆ ವಿಧಾನಸಭೆಗೆ ಹೋಗಿ. ಆಗ ಸರ್ಕಾರಕ್ಕೆ ಬಿಸಿ ಮುಟ್ಟುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>