<p><strong>ಕಲಬುರ್ಗಿ:</strong> ಭಾರತದ ಕೋವಿಡ್ ಲಸಿಕೆಗೆ ಜಗತ್ತಿನ 25 ದೇಶಗಳಿಂದ ಬೇಡಿಕೆ ಬಂದಿದೆ. ನಮ್ಮ ವೈದ್ಯರು, ವೈದ್ಯಕೀಯ ಸಿಬ್ಬಂದಿಯನ್ನು ಅನುಮಾನಿಸುವುದು ಸರಿಯಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.</p>.<p>ಕಲಬುರ್ಗಿಯಲ್ಲಿ ನಿರ್ಮಿಸಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳು ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವೈದ್ಯರು ಲಸಿಕೆ ಪಡೆಯುವ ಮೂಲಕ ತಮ್ಮ ಆರೋಗ್ಯ ಹಾಗೂ ತಮ್ಮನ್ನು ನಂಬಿರುವವರ ಆರೋಗ್ಯ ಕಾಪಾಡಿಕೊಳ್ಳಬೇಕು. ದೇಶಿ ಲಸಿಕೆಯು ಕೋವಿಡ್ ಬಂದರೂ ಸಾವು ಸಂಭವಿಸದಂತೆ ತಡೆಯುವ ಸಾಮರ್ಥ್ಯ ಹೊಂದಿದೆ. ದೇಶದಲ್ಲಿ 1 ಕೋಟಿ ಜನ ಲಸಿಕೆ ಪಡೆದಿದ್ದಾರೆ. ರಾಜ್ಯದಲ್ಲಿ ಕೂಡ 6 ಲಕ್ಷ ಸಿಬ್ಬಂದಿಗೆ ಲಸಿಕೆ ನೀಡಿದ್ದೇವೆ. ಇದು ಕೂಡ ಗಮನಾರ್ಹ ಸಾಧನೆ ಎಂದು ಹೇಳಿದರು.</p>.<p>ರಾಜ್ಯಕ್ಕೆ ಹೊಸದಾಗಿ ಮತ್ತೆ ನಾಲ್ಕು ವೈದ್ಯಕೀಯ ಕಾಲೇಜುಗಳು ಮಂಜೂರಾಗಿವೆ. ಈ ಹಿಂದೆ ಕೂಡ 17 ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಎಲ್ಲ 21 ಕಾವೇಜುಗಳನ್ನು ಸಾಮಾನವಾಗಿ ಉತ್ಕೃಷ್ಟಗೊಳಿಸುವ ಮೂಲಕ ಏಮ್ಸ್ ಗಿಂತಲೂ ಶ್ರೇಷ್ಠವಾಗಿ ಬೆಳೆಸುವ ಗುರಿ ನನ್ನ ಮುಂದಿದೆ. ಕಲಬುರ್ಗಿಗೆ ಏಮ್ಸ್ ಬರುವುದೋ ಇಲ್ಲವೋ ಎನ್ನುವುದಕ್ಕಿಂತ ಈಗಿರುವ ಜಿಮ್ಸ್ ಅನ್ನೇ ಏಮ್ಸ್ ಮಟ್ಟಕ್ಕೆ ಬೆಳೆಸೋಣ. ಈ ಭಾಗದ ವೈದ್ಯಕೀಯ ಶಿಕ್ಷಣವನ್ನು ಗುಣಮಟ್ಟಗೊಳಿಸಲು ಆದ್ಯತೆ ನೀಡೋಣ. ಪೌಷ್ಟಿಕಾಂಶ ಕೊರತೆ ನೀಗಿಸುವುದು ಹಾಗೂ ಆರೋಗ್ಯ ಕ್ಷೇತ್ರ ಗುಣಮಟ್ಟಗೊಳಿಸುವುದು ಆದ್ಯತೆ ಆಗಲಿ ಎಂದೂ ಹೇಳಿದರು.</p>.<p>ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ಕಾಲೇಜುಗಳ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಇಂಥ ಕಾಲೇಜು ಸ್ಥಾಪನೆಗೆ ಅನುಮತಿ ನೀಡುವ ಮುನ್ನ ಗುಣಮಟ್ಟದ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕು ಎಂದು ಸಚಿವರು ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿಗೆ ಸಲಹೆ ನೀಡಿದರು.</p>.<p>ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ: ಕೋವಿಡ್ ಬಂದ ನಂತರವೇ ವೈದ್ಯಕೀಯ ಕ್ಷೇತ್ರದ ಮಹತ್ವ ಎಷ್ಟಿದೆ ಎಂದು ಪ್ರಪಂಚಕ್ಕೆ ಅರಿವಾಗಿದೆ. ಸೋಂಕು ವಿಪರೀತವಾದಾಗ ನಮ್ಮಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಬಹಳ ಕಾಡಿತು. ಹಿಂದಿನ ಸರ್ಕಾರಗಳು ಆರೋಗ್ಯಕ್ಕೆ ಆದ್ಯತೆ ನೀಡಬೇಕಿತ್ತು. ಈಗ ಆ ಕೊರತೆ ನೀಗಿಸಲು ಪ್ರಧಾನಿ ಮುಂದಾಗಿದ್ದಾರೆ. ಆರೋಗ್ಯ ಕ್ಷೇತ್ರಕ್ಕೆ ಶೇ 137ರಷ್ಟು ಹೆಚ್ಚು ಅನುದಾನ ನೀಡಿದ್ದಾರೆ. 138 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಮುಂದಾಗಿದ್ದಾರೆ. ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಕೂಡ ಹೆಚ್ಚಿನ ಅನುದಾನ ನೀಡಲು ಮುಖ್ಯಮಂತ್ರಿ ಅವರಿಗೆ ಪ್ರಸ್ತಾವ ಸಲ್ಲಿಸಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಭಾರತದ ಕೋವಿಡ್ ಲಸಿಕೆಗೆ ಜಗತ್ತಿನ 25 ದೇಶಗಳಿಂದ ಬೇಡಿಕೆ ಬಂದಿದೆ. ನಮ್ಮ ವೈದ್ಯರು, ವೈದ್ಯಕೀಯ ಸಿಬ್ಬಂದಿಯನ್ನು ಅನುಮಾನಿಸುವುದು ಸರಿಯಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.</p>.<p>ಕಲಬುರ್ಗಿಯಲ್ಲಿ ನಿರ್ಮಿಸಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳು ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವೈದ್ಯರು ಲಸಿಕೆ ಪಡೆಯುವ ಮೂಲಕ ತಮ್ಮ ಆರೋಗ್ಯ ಹಾಗೂ ತಮ್ಮನ್ನು ನಂಬಿರುವವರ ಆರೋಗ್ಯ ಕಾಪಾಡಿಕೊಳ್ಳಬೇಕು. ದೇಶಿ ಲಸಿಕೆಯು ಕೋವಿಡ್ ಬಂದರೂ ಸಾವು ಸಂಭವಿಸದಂತೆ ತಡೆಯುವ ಸಾಮರ್ಥ್ಯ ಹೊಂದಿದೆ. ದೇಶದಲ್ಲಿ 1 ಕೋಟಿ ಜನ ಲಸಿಕೆ ಪಡೆದಿದ್ದಾರೆ. ರಾಜ್ಯದಲ್ಲಿ ಕೂಡ 6 ಲಕ್ಷ ಸಿಬ್ಬಂದಿಗೆ ಲಸಿಕೆ ನೀಡಿದ್ದೇವೆ. ಇದು ಕೂಡ ಗಮನಾರ್ಹ ಸಾಧನೆ ಎಂದು ಹೇಳಿದರು.</p>.<p>ರಾಜ್ಯಕ್ಕೆ ಹೊಸದಾಗಿ ಮತ್ತೆ ನಾಲ್ಕು ವೈದ್ಯಕೀಯ ಕಾಲೇಜುಗಳು ಮಂಜೂರಾಗಿವೆ. ಈ ಹಿಂದೆ ಕೂಡ 17 ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಎಲ್ಲ 21 ಕಾವೇಜುಗಳನ್ನು ಸಾಮಾನವಾಗಿ ಉತ್ಕೃಷ್ಟಗೊಳಿಸುವ ಮೂಲಕ ಏಮ್ಸ್ ಗಿಂತಲೂ ಶ್ರೇಷ್ಠವಾಗಿ ಬೆಳೆಸುವ ಗುರಿ ನನ್ನ ಮುಂದಿದೆ. ಕಲಬುರ್ಗಿಗೆ ಏಮ್ಸ್ ಬರುವುದೋ ಇಲ್ಲವೋ ಎನ್ನುವುದಕ್ಕಿಂತ ಈಗಿರುವ ಜಿಮ್ಸ್ ಅನ್ನೇ ಏಮ್ಸ್ ಮಟ್ಟಕ್ಕೆ ಬೆಳೆಸೋಣ. ಈ ಭಾಗದ ವೈದ್ಯಕೀಯ ಶಿಕ್ಷಣವನ್ನು ಗುಣಮಟ್ಟಗೊಳಿಸಲು ಆದ್ಯತೆ ನೀಡೋಣ. ಪೌಷ್ಟಿಕಾಂಶ ಕೊರತೆ ನೀಗಿಸುವುದು ಹಾಗೂ ಆರೋಗ್ಯ ಕ್ಷೇತ್ರ ಗುಣಮಟ್ಟಗೊಳಿಸುವುದು ಆದ್ಯತೆ ಆಗಲಿ ಎಂದೂ ಹೇಳಿದರು.</p>.<p>ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ಕಾಲೇಜುಗಳ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಇಂಥ ಕಾಲೇಜು ಸ್ಥಾಪನೆಗೆ ಅನುಮತಿ ನೀಡುವ ಮುನ್ನ ಗುಣಮಟ್ಟದ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕು ಎಂದು ಸಚಿವರು ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿಗೆ ಸಲಹೆ ನೀಡಿದರು.</p>.<p>ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ: ಕೋವಿಡ್ ಬಂದ ನಂತರವೇ ವೈದ್ಯಕೀಯ ಕ್ಷೇತ್ರದ ಮಹತ್ವ ಎಷ್ಟಿದೆ ಎಂದು ಪ್ರಪಂಚಕ್ಕೆ ಅರಿವಾಗಿದೆ. ಸೋಂಕು ವಿಪರೀತವಾದಾಗ ನಮ್ಮಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಬಹಳ ಕಾಡಿತು. ಹಿಂದಿನ ಸರ್ಕಾರಗಳು ಆರೋಗ್ಯಕ್ಕೆ ಆದ್ಯತೆ ನೀಡಬೇಕಿತ್ತು. ಈಗ ಆ ಕೊರತೆ ನೀಗಿಸಲು ಪ್ರಧಾನಿ ಮುಂದಾಗಿದ್ದಾರೆ. ಆರೋಗ್ಯ ಕ್ಷೇತ್ರಕ್ಕೆ ಶೇ 137ರಷ್ಟು ಹೆಚ್ಚು ಅನುದಾನ ನೀಡಿದ್ದಾರೆ. 138 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಮುಂದಾಗಿದ್ದಾರೆ. ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಕೂಡ ಹೆಚ್ಚಿನ ಅನುದಾನ ನೀಡಲು ಮುಖ್ಯಮಂತ್ರಿ ಅವರಿಗೆ ಪ್ರಸ್ತಾವ ಸಲ್ಲಿಸಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>