‘ಪ್ರಧಾನಿ ನರೇಂದ್ರ ಮೋದಿ ಅವರು ಬಡವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ‘ಪ್ರಧಾನಮಂತ್ರಿ ಆವಾಸ್’ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಯೋಜನೆಯ ಸರ್ವೆ ಮಾಡುವಲ್ಲಿ ಮತ್ತು ಹಂಚಿಕೆಯಲ್ಲಿ ಅಧಿಕಾರಿಗಳು ರಾಜಕೀಯ ಮಾಡ ಬಾರದು. ಜಾತಿ, ಧರ್ಮ, ಪಕ್ಷ ಬೇಧ ಮರೆತು ನಿಜವಾದ ಫಲಾನುಭವಿಗಳಿಗೆ ಯೋಜನೆ ತಲುಪಿಸುವ ನಿಟ್ಟಿನಲ್ಲಿ ನಿಷ್ಪಕ್ಷಪಾತ ಕೆಲಸ ಮಾಡಬೇಕು. ಒಂದು ವೇಳೆ ಅಧಿಕಾರಿಗಳು ತಾರತಮ್ಯದ ಕೆಲಸ ಮಾಡುತ್ತಿರುವುದು ಕಂಡುಬಂದಲ್ಲಿ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು.