‘ಇದೇ 19ರಂದು ವಿ.ವಿ. ಆವರಣದಲ್ಲಿ ನಡೆಯಲಿರುವ 41ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿ.ವಿ. ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಗಣ್ಯರಿಗೆ ಡಾಕ್ಟರೇಟ್ ಪದವಿಗಳನ್ನು ಪ್ರದಾನ ಮಾಡುವರು. ಒಟ್ಟಾರೆ 14 ಗಣ್ಯರ ಹೆಸರುಗಳನ್ನು ಗೌರವ ಡಾಕ್ಟರೇಟ್ ಪದವಿಗೆ ಸಿಂಡಿಕೇಟ್ ಸಭೆ ಶಿಫಾರಸು ಮಾಡಿತ್ತು. ಅದರಲ್ಲಿ ಮೂವರಿಗೆ ನೀಡಲು ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.