<p><strong>ಶಹಾಬಾದ್:</strong> ತಾಲ್ಲೂಕಿನ ಎಚ್ಎಂಪಿ ಕಾರ್ಖಾನೆಯ ಜೆ.ಪಿ ಕಾಲೊನಿಗೆ ತರಕಾರಿ ಮಾರುವ ವಯೋವೃದ್ಧ ಹನುಮಂತ ಎಂಬುವರು ವ್ಯಾಪಾರಕ್ಕಾಗಿ ಹೋಗಿದ್ದಾಗ ಅಲ್ಲಿರುವ ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿವೆ.</p>.<p>ಬೀದಿ ನಾಯಿಗಳು ವೃದ್ಧನ ಮೇಲೆ ದಾಳಿಮಾಡಿ ಕಚ್ಚಿ ತೀವ್ರವಾಗಿ ಗಾಯಗೊಳಿಸಿವೆ. ಕಾಲಿಗೆ ಕಚ್ಚಿದ್ದರಿಂದ ತುಂಬಾ ರಕ್ತ ಸ್ರಾವವಾಗಿದೆ. ತಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಂದು ಪ್ರಾರ್ಥಮಿಕ ಚಿಕಿತ್ಸೆ ನೀಡಲಾಗಿದೆ.</p>.<p>ತಿಂಗಳ ಹಿಂದೆ ನಗರಸಭೆಯ ವಾರ್ಡ್ ನಂ–27ರ ಯುವ ಮುಖಂಡ ಮೊಹಮ್ಮದ್ ಇಮ್ರಾನ್ ಅವರು ಜೆ.ಪಿ ಕಾಲೊನಿಯಲ್ಲಿ ನಾಯಿಗಳ ಹಾವಳಿ ಜಾಸ್ತಿಯಾಗಿದೆ, ಇವುಗಳನ್ನು ತಡೆಯಿರಿ ಎಂದು ಎನ್ಎಸಿ ಮುಖ್ಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದರು.</p>.<p>ಆದರೆ, ಎನ್ಎಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಧಿಕಾರಿ ಮತ್ತು ಜನ ಪ್ರತಿನಿಧಿಗಳ ಮಾತಿಗೂ ಬೆಲೆ ಕೊಡದೇ ನಾಯಿಗಳ ಹಾವಳಿ ತಡೆಯಲು ವಿಫಲರಾಗಿದ್ದಾರೆ. ನಾಯಿಗಳ ದಾಳಿ ಹೆಚ್ಚಾಗಿ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳ ಈ ನಿಷ್ಕಾಳಜಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಕಾಲೊನಿ ಸ್ವಚ್ಛತೆ ಮತ್ತು ನಾಯಿಗಳ ಹಾವಳಿ ಬಗ್ಗೆ ಕಾಲೊನಿಯ ನಿವಾಸಿಗಳು ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದರು ಕೂಡ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ನಾಯಿಗಳನ್ನು ಸೆರೆ ಹಿಡಿಯಬೇಕು ಹಾಗೆ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮವಾಗಬೇಕು ಎಂದು ನಿವಾಸಿಗಳ ಒತ್ತಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಬಾದ್:</strong> ತಾಲ್ಲೂಕಿನ ಎಚ್ಎಂಪಿ ಕಾರ್ಖಾನೆಯ ಜೆ.ಪಿ ಕಾಲೊನಿಗೆ ತರಕಾರಿ ಮಾರುವ ವಯೋವೃದ್ಧ ಹನುಮಂತ ಎಂಬುವರು ವ್ಯಾಪಾರಕ್ಕಾಗಿ ಹೋಗಿದ್ದಾಗ ಅಲ್ಲಿರುವ ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿವೆ.</p>.<p>ಬೀದಿ ನಾಯಿಗಳು ವೃದ್ಧನ ಮೇಲೆ ದಾಳಿಮಾಡಿ ಕಚ್ಚಿ ತೀವ್ರವಾಗಿ ಗಾಯಗೊಳಿಸಿವೆ. ಕಾಲಿಗೆ ಕಚ್ಚಿದ್ದರಿಂದ ತುಂಬಾ ರಕ್ತ ಸ್ರಾವವಾಗಿದೆ. ತಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಂದು ಪ್ರಾರ್ಥಮಿಕ ಚಿಕಿತ್ಸೆ ನೀಡಲಾಗಿದೆ.</p>.<p>ತಿಂಗಳ ಹಿಂದೆ ನಗರಸಭೆಯ ವಾರ್ಡ್ ನಂ–27ರ ಯುವ ಮುಖಂಡ ಮೊಹಮ್ಮದ್ ಇಮ್ರಾನ್ ಅವರು ಜೆ.ಪಿ ಕಾಲೊನಿಯಲ್ಲಿ ನಾಯಿಗಳ ಹಾವಳಿ ಜಾಸ್ತಿಯಾಗಿದೆ, ಇವುಗಳನ್ನು ತಡೆಯಿರಿ ಎಂದು ಎನ್ಎಸಿ ಮುಖ್ಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದರು.</p>.<p>ಆದರೆ, ಎನ್ಎಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಧಿಕಾರಿ ಮತ್ತು ಜನ ಪ್ರತಿನಿಧಿಗಳ ಮಾತಿಗೂ ಬೆಲೆ ಕೊಡದೇ ನಾಯಿಗಳ ಹಾವಳಿ ತಡೆಯಲು ವಿಫಲರಾಗಿದ್ದಾರೆ. ನಾಯಿಗಳ ದಾಳಿ ಹೆಚ್ಚಾಗಿ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳ ಈ ನಿಷ್ಕಾಳಜಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಕಾಲೊನಿ ಸ್ವಚ್ಛತೆ ಮತ್ತು ನಾಯಿಗಳ ಹಾವಳಿ ಬಗ್ಗೆ ಕಾಲೊನಿಯ ನಿವಾಸಿಗಳು ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದರು ಕೂಡ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ನಾಯಿಗಳನ್ನು ಸೆರೆ ಹಿಡಿಯಬೇಕು ಹಾಗೆ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮವಾಗಬೇಕು ಎಂದು ನಿವಾಸಿಗಳ ಒತ್ತಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>