ಬಾಲ ಸಂಗಮ ಸಂಘಟನೆಯ ಸದಸ್ಯೆ ಪ್ರಿಯಾಂಕ ಮಾವಿನಕರ ಮಾತನಾಡಿ, ಬಡವರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಾರೆ. ಒಂದು ಹೊತ್ತಿನ ಊಟ ಕೊಡಲು ಆಗುವುದಿಲ್ಲ ಎಂದು ಎಷ್ಟೋ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುತ್ತಿದ್ದಾರೆ. ಶಾಲೆಯಲ್ಲಿ ಮೊಟ್ಟೆ, ಬಾಳೆಹಣ್ಣು, ಹಾಲು ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆ ಎಂದರು.