<p><strong>ಕಲಬುರಗಿ:</strong> ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿರುವ ಕ್ರೀಡಾ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ವಸತಿ ನಿಲಯ ಹಳೆಯದಾಗಿದ್ದು, ಇದನ್ನು ಕೆಡವಿ ಇಲ್ಲಿಯೇ ತಲಾ 50 ಬಾಲಕ-ಬಾಲಕಿಯರ ಪ್ರತ್ಯೇಕ ವಾಸಕ್ಕೆ ಅನುಕೂಲವಾಗುವಂತೆ ಸುಸಜ್ಜಿತ ವಸತಿ ನಿಲಯ ನಿರ್ಮಿಸಬೇಕಿದೆ. ನಿವೇಶನದ ಸರ್ವೆ ಕಾರ್ಯ ಆರಂಭಿಸುವಂತೆ ಕೆಆರ್ಐಡಿಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ಸೌರಭ್ ಅವರಿಗೆ ಸೂಚಿಸಿದರು.</p>.<p>ವಸತಿ ನಿಲಯದಲ್ಲಿ ಅಡುಗೆ ಕೋಣೆ, ಊಟದ ಕೋಣೆ, ವಾಸಸ್ಥಾನ, ಕ್ರೀಡಾ ಸಾಮಗ್ರಿ ಇಟ್ಟುಕೊಳ್ಳಲು ಪ್ರತ್ಯೇಕ ಸ್ಥಳ, ಶೌಚಾಲಯ ಹೀಗೆ ಸಕಲ ಸೌಕರ್ಯ ಒಳಗೊಂಡ ಕಟ್ಟಡ ನಿರ್ಮಾಣಕ್ಕೆ ನೀಲನಕ್ಷೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ನಂತರ ಐವಾನ್-ಎ-ಶಾಹಿ ಅತಿಥಿಗೃಹಕ್ಕೆ ಭೇಟಿ ನೀಡಿ ನೂತನ ಅತಿಥಿಗೃಹಗಳ ಕಟ್ಟಡ ದುರಸ್ತಿ, ಅನೆಕ್ಸ್ ಕಟ್ಟಡದಲ್ಲಿ ಎರಡನೇ ಮಹಡಿ ನಿರ್ಮಾಣ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p><strong>ರಂಗಮಂದಿರ ದುರಸ್ತಿಗೆ ಪಟ್ಟಿ ಕೊಡಿ</strong>: ನಂತರ ಡಾ. ಎಸ್.ಎಂ.ಪಂಡಿತ್ ರಂಗಮಂದಿರಕ್ಕೆ ಡಿಸಿ ಅವರು ಭೇಟಿ ನೀಡಿ ಕಟ್ಟಡ ವೀಕ್ಷಿಸಿದರು.</p>.<p>ರಂಗಾಯಣದ ಮಾಜಿ ನಿರ್ದೇಶಕ ಪ್ರೊ. ಆರ್.ಕೆ.ಹುಡಗಿ, ರವೀಂದ್ರ ಶಾಬಾದಿ ಅವರು ಮಾಹಿತಿ ನೀಡಿ, ರಂಗಮಂದಿರದಲ್ಲಿ ಪ್ರತಿನಿತ್ಯ ಸರ್ಕಾರಿ-ಖಾಸಗಿ ಕಾರ್ಯಕ್ರಮ ನಡೆಯುತ್ತವೆ. ಸೌಂಡ್ ಸಿಸ್ಟಮ್ ವ್ಯವಸ್ಥೆ ಇಲ್ಲದ ಕಾರಣ ಹೊರಗಿನಿಂದ ಬಾಡಿಗೆಗೆ ತರಬೇಕಾಗಿದೆ. ಕಿಟಕಿ ಗಾಜು ಒಡೆದಿವೆ ಎಂಬಿತ್ಯಾದಿ ವಿಷಯಗಳನ್ನು ಡಿಸಿ ಗಮನಕ್ಕೆ ತಂದರು.</p>.<p>ಫ.ಗು. ಹಳಕಟ್ಟಿಯವರ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಲಹೆಗಾರ, ಆಳಂದ ಶಾಸಕ ಬಿ.ಆರ್.ಪಾಟೀಲ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ದತ್ತಪ್ಪ ಸಾಗನೂರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿರುವ ಕ್ರೀಡಾ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ವಸತಿ ನಿಲಯ ಹಳೆಯದಾಗಿದ್ದು, ಇದನ್ನು ಕೆಡವಿ ಇಲ್ಲಿಯೇ ತಲಾ 50 ಬಾಲಕ-ಬಾಲಕಿಯರ ಪ್ರತ್ಯೇಕ ವಾಸಕ್ಕೆ ಅನುಕೂಲವಾಗುವಂತೆ ಸುಸಜ್ಜಿತ ವಸತಿ ನಿಲಯ ನಿರ್ಮಿಸಬೇಕಿದೆ. ನಿವೇಶನದ ಸರ್ವೆ ಕಾರ್ಯ ಆರಂಭಿಸುವಂತೆ ಕೆಆರ್ಐಡಿಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ಸೌರಭ್ ಅವರಿಗೆ ಸೂಚಿಸಿದರು.</p>.<p>ವಸತಿ ನಿಲಯದಲ್ಲಿ ಅಡುಗೆ ಕೋಣೆ, ಊಟದ ಕೋಣೆ, ವಾಸಸ್ಥಾನ, ಕ್ರೀಡಾ ಸಾಮಗ್ರಿ ಇಟ್ಟುಕೊಳ್ಳಲು ಪ್ರತ್ಯೇಕ ಸ್ಥಳ, ಶೌಚಾಲಯ ಹೀಗೆ ಸಕಲ ಸೌಕರ್ಯ ಒಳಗೊಂಡ ಕಟ್ಟಡ ನಿರ್ಮಾಣಕ್ಕೆ ನೀಲನಕ್ಷೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ನಂತರ ಐವಾನ್-ಎ-ಶಾಹಿ ಅತಿಥಿಗೃಹಕ್ಕೆ ಭೇಟಿ ನೀಡಿ ನೂತನ ಅತಿಥಿಗೃಹಗಳ ಕಟ್ಟಡ ದುರಸ್ತಿ, ಅನೆಕ್ಸ್ ಕಟ್ಟಡದಲ್ಲಿ ಎರಡನೇ ಮಹಡಿ ನಿರ್ಮಾಣ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p><strong>ರಂಗಮಂದಿರ ದುರಸ್ತಿಗೆ ಪಟ್ಟಿ ಕೊಡಿ</strong>: ನಂತರ ಡಾ. ಎಸ್.ಎಂ.ಪಂಡಿತ್ ರಂಗಮಂದಿರಕ್ಕೆ ಡಿಸಿ ಅವರು ಭೇಟಿ ನೀಡಿ ಕಟ್ಟಡ ವೀಕ್ಷಿಸಿದರು.</p>.<p>ರಂಗಾಯಣದ ಮಾಜಿ ನಿರ್ದೇಶಕ ಪ್ರೊ. ಆರ್.ಕೆ.ಹುಡಗಿ, ರವೀಂದ್ರ ಶಾಬಾದಿ ಅವರು ಮಾಹಿತಿ ನೀಡಿ, ರಂಗಮಂದಿರದಲ್ಲಿ ಪ್ರತಿನಿತ್ಯ ಸರ್ಕಾರಿ-ಖಾಸಗಿ ಕಾರ್ಯಕ್ರಮ ನಡೆಯುತ್ತವೆ. ಸೌಂಡ್ ಸಿಸ್ಟಮ್ ವ್ಯವಸ್ಥೆ ಇಲ್ಲದ ಕಾರಣ ಹೊರಗಿನಿಂದ ಬಾಡಿಗೆಗೆ ತರಬೇಕಾಗಿದೆ. ಕಿಟಕಿ ಗಾಜು ಒಡೆದಿವೆ ಎಂಬಿತ್ಯಾದಿ ವಿಷಯಗಳನ್ನು ಡಿಸಿ ಗಮನಕ್ಕೆ ತಂದರು.</p>.<p>ಫ.ಗು. ಹಳಕಟ್ಟಿಯವರ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಲಹೆಗಾರ, ಆಳಂದ ಶಾಸಕ ಬಿ.ಆರ್.ಪಾಟೀಲ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ದತ್ತಪ್ಪ ಸಾಗನೂರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>