‘ಜೋಡಿ ಕೊಲೆ ಬಗ್ಗೆ 15 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ, ಪ್ರಕರಣದಲ್ಲಿ ಆರೋಪಿ–1 ಸುಭಾಷ ರಾಠೋಡ, ಆರೋಪಿ– 2 ವಸಂತ ರಾಠೋಡ ಎಂಬುವವರನ್ನೇ ಬಂಧಿಸಿಲ್ಲ. ಹೀಗಾಗಿ ಪೊಲೀಸರು ರಾಜಕೀಯ ಒತ್ತಡಕ್ಕೆ ಸಿಲುಕಿರುವ ಅನುಮಾನ ಬರುತ್ತಿದೆ. ತಂದೆ– ತಾಯಿಯನ್ನು ಕಳೆದುಕೊಂಡು ಮಕ್ಕಳಿಗೆ ಇದೂವರೆಗೆ ಯಾವುದೇ ಜನಪ್ರತಿನಿಧಿಗಳು ಸಾಂತ್ವನ ಹೇಳಿಲ್ಲ. ಪ್ರಮುಖ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು, ಮಕ್ಕಳ ಜೀವನ ಭದ್ರತೆಗೆ ಕ್ರಮ ಕೈಗೊಳ್ಳಬೇಕು’ ಎಂದೂ ಆಗ್ರಹಿಸಿದರು.