<p><strong>ಕಲಬುರಗಿ:</strong> ‘ದೇಶದ ಸ್ವಾತಂತ್ರ್ಯದ ನಂತರ ದಿನದಿಂದ ದಿನಕ್ಕೆ, ವರ್ಷದಿಂದ ವರ್ಷಕ್ಕೆ ಬೆಳೆಯುತ್ತಲೇ ಇರುವ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್. ಈ ದೇಶ ಇರುವ ತನಕ ಮಹಾತ್ಮ ಗಾಂಧಿ ಹಾಗೂ ಡಾ.ಅಂಬೇಡ್ಕರ್ ಇರುತ್ತಾರೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಹೇಳಿದರು.</p><p>ನಗರದ ಶರಣ ಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಸಂವಿಧಾನ–75, ಬದಲಾಯಿಸಿದ್ದು ಯಾರು, ಬಲಪಡಿಸಿದ್ದು ಯಾರು?’ ಪುಸಕ್ತ ಬಿಡುಗಡೆ ಮಾಡಿ ಅವರು ಮಾತನಾಡಿದರು.</p><p>‘ಯೋಜನಾ ಸಚಿವನಾಗಬೇಕು, ಶೋಷಿತರನ್ನು ಮೇಲೆತ್ತಬೇಕೆಂಬ ಆಶಯ ಅಂಬೇಡ್ಕರ್ ಅವರದಾಗಿತ್ತು. ಕಾಲಕೂಡಿ ಬಂದು ಅಂಬೇಡ್ಕರ್ ದೇಶದ ಪ್ರಧಾನಿ ಆಗಿದ್ದರಂತೂ ಇಷ್ಟೊತ್ತಿಗೆ ಅಮೆರಿಕವನ್ನು ಭಾರತ ಹಿಂದಿಕ್ಕಿರುತ್ತಿತ್ತು. ಆಕಸ್ಮಿಕವಾಗಿ ಸರ್ದಾರ್ ವಲ್ಲಭಭಾಯಿ ಪಟೇಲರೇ ದೇಶದ ಮೊದಲ ಪ್ರಧಾನಿಯಾಗಿರುತ್ತಿದ್ದರೆ, ನಮ್ಮ ದೇಶವು ಅಮೆರಿಕವನ್ನು ಹಿಂದಿಕ್ಕಿರುತ್ತಿತ್ತು’ ಎಂದು ಅಭಿಪ್ರಾಯಪಟ್ಟರು.</p><p>‘ಪಟೇಲರೇ ಪ್ರಧಾನಿ ಆಗಬೇಕು ಎಂದು ಆಗಿ 16 ರಾಜ್ಯಗಳ ಪೈಕಿ 14 ರಾಜ್ಯಗಳು ಒಲವು ವ್ಯಕ್ತಪಡಿಸಿದ್ದವು. ಎರಡು ರಾಜ್ಯಗಳು ಮಾತ್ರವೇ ನೆಹರೂ ಪರವಾಗಿದ್ದವು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ದೇಶದ ಸ್ವಾತಂತ್ರ್ಯದ ನಂತರ ದಿನದಿಂದ ದಿನಕ್ಕೆ, ವರ್ಷದಿಂದ ವರ್ಷಕ್ಕೆ ಬೆಳೆಯುತ್ತಲೇ ಇರುವ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್. ಈ ದೇಶ ಇರುವ ತನಕ ಮಹಾತ್ಮ ಗಾಂಧಿ ಹಾಗೂ ಡಾ.ಅಂಬೇಡ್ಕರ್ ಇರುತ್ತಾರೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಹೇಳಿದರು.</p><p>ನಗರದ ಶರಣ ಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಸಂವಿಧಾನ–75, ಬದಲಾಯಿಸಿದ್ದು ಯಾರು, ಬಲಪಡಿಸಿದ್ದು ಯಾರು?’ ಪುಸಕ್ತ ಬಿಡುಗಡೆ ಮಾಡಿ ಅವರು ಮಾತನಾಡಿದರು.</p><p>‘ಯೋಜನಾ ಸಚಿವನಾಗಬೇಕು, ಶೋಷಿತರನ್ನು ಮೇಲೆತ್ತಬೇಕೆಂಬ ಆಶಯ ಅಂಬೇಡ್ಕರ್ ಅವರದಾಗಿತ್ತು. ಕಾಲಕೂಡಿ ಬಂದು ಅಂಬೇಡ್ಕರ್ ದೇಶದ ಪ್ರಧಾನಿ ಆಗಿದ್ದರಂತೂ ಇಷ್ಟೊತ್ತಿಗೆ ಅಮೆರಿಕವನ್ನು ಭಾರತ ಹಿಂದಿಕ್ಕಿರುತ್ತಿತ್ತು. ಆಕಸ್ಮಿಕವಾಗಿ ಸರ್ದಾರ್ ವಲ್ಲಭಭಾಯಿ ಪಟೇಲರೇ ದೇಶದ ಮೊದಲ ಪ್ರಧಾನಿಯಾಗಿರುತ್ತಿದ್ದರೆ, ನಮ್ಮ ದೇಶವು ಅಮೆರಿಕವನ್ನು ಹಿಂದಿಕ್ಕಿರುತ್ತಿತ್ತು’ ಎಂದು ಅಭಿಪ್ರಾಯಪಟ್ಟರು.</p><p>‘ಪಟೇಲರೇ ಪ್ರಧಾನಿ ಆಗಬೇಕು ಎಂದು ಆಗಿ 16 ರಾಜ್ಯಗಳ ಪೈಕಿ 14 ರಾಜ್ಯಗಳು ಒಲವು ವ್ಯಕ್ತಪಡಿಸಿದ್ದವು. ಎರಡು ರಾಜ್ಯಗಳು ಮಾತ್ರವೇ ನೆಹರೂ ಪರವಾಗಿದ್ದವು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>