‘ಆರ್ಥಿಕ ಇಲಾಖೆ ಬೇಕಾಬಿಟ್ಟಿ ನಿರ್ಬಂಧ ಹೇರುವುದಕ್ಕೆ ಅವಕಾಶ ಇಲ್ಲ. ಅಲ್ಲದೇ, ಈ ಭಾಗದ ಅಭಿವೃದ್ಧಿಗೆ ಸಂವಿಧಾನ ಬದ್ಧವಾಗಿ ನಿಯಮಗಳನ್ನು ರೂಪಿಸಿ, ಕಾನೂನು ಪ್ರಕಾರ ಅವಕಾಶ ಕಲ್ಪಿಸಲಾಗಿದೆ. ವೃಂದ ಹಾಗೂ ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಮಾಡುವ ಸಂದರ್ಭದಲ್ಲಿ ಆರ್ಥಿಕ ಇಲಾಖೆಯ ಸಹಮತಿ ಪಡೆಯುವುದು ಅಗತ್ಯವೇ ಇಲ್ಲ. ಇದು ಆದೇಶದಲ್ಲೂ ಇದ್ದು, ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ವೇಳೆ ನಾನೇ ಈ ಆದೇಶ ಹೊರಡಿಸಿದ್ದೇನೆ. ಹಾಗಾಗಿ, 371ಜೆ ಸೇರಿದಂತೆ ಈ ಭಾಗದ ನೇಮಕಾತಿಗಳಿಗೆ ಆರ್ಥಿಕ ಇಲಾಖೆ ಅನುಮೋದನೆ ಬೇಕಿಲ್ಲ. ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ’ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.