ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಂಜಾರ ಸಮುದಾಯದ ಮತದಾರರು ಬಹಳ ಪ್ರಬುದ್ಧರಿದ್ದಾರೆ. ಬಾಬುರಾವ್ ಅವರಿಗೆ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಸ್ಥಾನವನ್ನು ಕೊಟ್ಟಿತ್ತು. ಬಂಜಾರ ಸಮುದಾಯದವರಿಗೆ ಇಷ್ಟು ಉನ್ನತ ಹುದ್ದೆಯನ್ನು ಯಾರೂ ನೀಡಿರಲಿಲ್ಲ. ಬಾಬುರಾವ್ ರಾಜೀನಾಮೆ ನೀಡಿದ್ದಾರೆ ಅಷ್ಟೆ. ಆದರೆ, ಇನ್ನೂ ಯಾವುದೇ ಪಕ್ಷಕ್ಕೆ ಸೇರಿಲ್ಲ. ಎಲ್ಲರೂ ಒಗ್ಗೂಡಿ ಕೆಲಸ ಮಾಡೋಣ ಎಂದು ಅವರಲ್ಲಿ ಮನವಿ ಮಾಡುತ್ತೇವೆ’ ಎಂದರು.