ಜಲ ಮೂಲಗಳಿಂದ ಕೊಳವೆ ಮೂಲಕ ತೀರ ಅಗತ್ಯ ಇದ್ದಲ್ಲಿ ವಾಹನಗಳ ಮುಖೇನ ನೀರು ಸರಬರಾಜು ಮಾಡಲಾಗುವುದು. 151 ಕೊಳವೆ ಬಾವಿಗಳನ್ನು ಪತ್ತೆ ಹಚ್ಚಿ ಅವುಗಳ ದುರಸ್ತಿಗೂ ಟಾಸ್ಕ್ ಪೋರ್ಸ್ ಸಭೆಯಲ್ಲಿ ಸೂಚಿಸಲಾಗಿದೆಅಲ್ಲಮಪ್ರಭು ಪಾಟೀಲ ಕಲಬುರಗಿ ದಕ್ಷಿಣ ಶಾಸಕರು
ಆಳಂದದಲ್ಲಿ ಕೊಳವೆ ಬಾವಿ ಕೊರೆಸಿದರು ಸಮರ್ಪಕ ನೀರು ಸಿಗುತ್ತಿಲ್ಲ. ಖಾಸಗಿ ಕೊಳವೆ ಬಾವಿ ತೆರೆದ ಬಾವಿಯ ಮೂಲಕ ನೀರು ಪೂರೈಸಲಾಗುವುದುಮಾನಪ್ಪ ಕಟ್ಟಿಮನಿ ಆಳಂದ ತಾ.ಪಂ ಇಒ
ಸರ್ಕಾರ ಆಲಮಟ್ಟಿ ಜಲಾಶಯದಿಂದ ಇಂಡಿ ಕಾಲುವೆ 18ರ ಮೂಲಕ ಭೀಮಾ ನದಿಗೆ ನೀರು ಹರಿಸಿದರೆ ಜಿಲ್ಲೆಯ ನೀರಿನ ಸಮಸ್ಯೆಗೆ ಒಂದಿಷ್ಟು ಪರಿಹಾರ ಸಿಗುತ್ತದೆಸಿದ್ದು ದಣ್ಣೂರ ಅಫಜಲಪುರ ತಾಲ್ಲೂಕು ಜಲ ಸಮಿತಿ ಒಕ್ಕೂಟದ ಅಧ್ಯಕ್ಷ
ಬೇಸಿಗೆಯಲ್ಲಿ ಮೂರು ದಿನಕ್ಕೊಮ್ಮೆ ನಲ್ಲಿ ನೀರು ಸರಬುರಾಜು ಮಾಡುತ್ತಾರೆ. ಕಟ್ಟಿಸಂಗಾವಿ ಸಮೀಪ ಭೀಮಾ ನದಿಯಲ್ಲಿ ನೀರು ಸಂಗ್ರಹಿಸಿಟ್ಟುಕೊಂಡರೆ ನೀರಿನ ಸಮಸ್ಯೆ ಎದುರಾಗುವುದಿಲ್ಲಭೀಮರಾಯ ಮಡಿವಾಳ ಜೇವರ್ಗಿ ನಿವಾಸಿ
ಜೇವರ್ಗಿ ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ತಾಲ್ಲೂಕು ಆಡಳಿತ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬೇಕುಮರೆಪ್ಪ ಹಸನಾಪುರ ಜೇವರ್ಗಿ ನಿವಾಸಿ
ರಾಸಣಗಿ ಗ್ರಾಮದಲ್ಲಿ ಸುಮಾರು ₹ 42 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದ ಕುಡಿಯುವ ನೀರು ಶುದ್ಧೀಕರಣ ಘಟಕ ಉಪಯೋಗಕ್ಕೆ ಬರುತ್ತಿಲ್ಲ. ಭೀಮಾ ನದಿ ನೀರು ಕಲುಷಿತವಾಗಿದ್ದು ಯಾರೂ ಉಪಯೋಗಿಸುತ್ತಿಲ್ಲಮಲ್ಲೇಶಿ ಹೊಸಮನಿ ರಾಸಣಗಿ ಗ್ರಾಮಸ್ಥ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.