<p><strong>ಅಫಜಲಪುರ: </strong>ತಾಲ್ಲೂಕಿನ ಬೋಗನಳ್ಳಿ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ಕಲಬುರ್ಗಿ ಮುಖ್ಯ ರಸ್ತೆಯಿಂದ ಗ್ರಾಮಕ್ಕೆ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಗುತ್ತಿಗೆದಾರರಿಗೆ ಗ್ರಾಮಸ್ಥರು ಸಹಕಾರ ನೀಡಿ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು ಎಂದು ಶಾಸಕ ಎಂ.ವೈ.ಪಾಟೀಲ ತಿಳಿಸಿದರು.</p>.<p>ತಾಲ್ಲೂಕಿನ ಬೋಗನಳ್ಳಿ ಗ್ರಾಮದಲ್ಲಿ ಗುರುವಾರ ₹ 15 ಲಕ್ಷ ವೆಚ್ಚದ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ರಸ್ತೆ ಅಭಿವೃದ್ಧಿಗಾಗಿ ₹ 1.50 ಕೋಟಿ ಅನುದಾನ ನೀಡಿದ್ದೇನೆ. ಇಷ್ಟರಲ್ಲಿಯೇ ಟೆಂಡರ್ ಆಗುತ್ತದೆ. ಸರಿಯಾಗಿ ಕೆಲಸ ಮಾಡಿಕೊಳ್ಳಿ ಮತ್ತು ಗ್ರಾಮಕ್ಕೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡಿಕೊಡಲಾಗುವದು ಎಂದು ತಿಳಿಸಿದರು.</p>.<p>ಮುಖಂಡ ಮನಸೂರ ಪಟೇಲ ಮಾತನಾಡಿ, ನಮ್ಮ ಗ್ರಾಮದಲ್ಲಿ ಹಿಂದೂ ಸಮಾಜದವರಿಗೆ ಸಮುದಾಯ ಭವನ, ಕರಬಸ್ತಾನಕ್ಕೆ ಕಾಂಪೌಂಡ್ ಗೋಡೆ, ಪರಿಶಿಷ್ಟ ಜಾತಿ ಅವರ ಕಾಲೊನಿಯವರಿಗೆ ಸ್ಮಶಾನ ಭೂಮಿ ಅವಶ್ಯಕತೆಯಿದೆ. ಅದನ್ನು ಶಾಸಕರು ಮಾಡಬೇಕೆಂದು ತಿಳಿಸಿದರು.</p>.<p>ಸಮಾರಂಭದಲ್ಲಿ ಗ್ರಾಮದ ಮುಖಂಡರಾದ ಸರ್ಧಾರ ಪಟೇಲ, ಸಾವಯವ ಕೃಷಿ ತಜ್ಞ ಲತೀಪ ಪಟೇಲ ಮದರಾ, ದತ್ತು ಸುತಾರ, ಹಸನ್ ಪಟೇಲ, ರಮೇಶ ನಿಲೇಕರ, ಗುತ್ತಿಗೆದಾರರಾದ ಹನುಮಂತರಾಯ ನೂಲೆಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ: </strong>ತಾಲ್ಲೂಕಿನ ಬೋಗನಳ್ಳಿ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ಕಲಬುರ್ಗಿ ಮುಖ್ಯ ರಸ್ತೆಯಿಂದ ಗ್ರಾಮಕ್ಕೆ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಗುತ್ತಿಗೆದಾರರಿಗೆ ಗ್ರಾಮಸ್ಥರು ಸಹಕಾರ ನೀಡಿ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು ಎಂದು ಶಾಸಕ ಎಂ.ವೈ.ಪಾಟೀಲ ತಿಳಿಸಿದರು.</p>.<p>ತಾಲ್ಲೂಕಿನ ಬೋಗನಳ್ಳಿ ಗ್ರಾಮದಲ್ಲಿ ಗುರುವಾರ ₹ 15 ಲಕ್ಷ ವೆಚ್ಚದ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ರಸ್ತೆ ಅಭಿವೃದ್ಧಿಗಾಗಿ ₹ 1.50 ಕೋಟಿ ಅನುದಾನ ನೀಡಿದ್ದೇನೆ. ಇಷ್ಟರಲ್ಲಿಯೇ ಟೆಂಡರ್ ಆಗುತ್ತದೆ. ಸರಿಯಾಗಿ ಕೆಲಸ ಮಾಡಿಕೊಳ್ಳಿ ಮತ್ತು ಗ್ರಾಮಕ್ಕೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡಿಕೊಡಲಾಗುವದು ಎಂದು ತಿಳಿಸಿದರು.</p>.<p>ಮುಖಂಡ ಮನಸೂರ ಪಟೇಲ ಮಾತನಾಡಿ, ನಮ್ಮ ಗ್ರಾಮದಲ್ಲಿ ಹಿಂದೂ ಸಮಾಜದವರಿಗೆ ಸಮುದಾಯ ಭವನ, ಕರಬಸ್ತಾನಕ್ಕೆ ಕಾಂಪೌಂಡ್ ಗೋಡೆ, ಪರಿಶಿಷ್ಟ ಜಾತಿ ಅವರ ಕಾಲೊನಿಯವರಿಗೆ ಸ್ಮಶಾನ ಭೂಮಿ ಅವಶ್ಯಕತೆಯಿದೆ. ಅದನ್ನು ಶಾಸಕರು ಮಾಡಬೇಕೆಂದು ತಿಳಿಸಿದರು.</p>.<p>ಸಮಾರಂಭದಲ್ಲಿ ಗ್ರಾಮದ ಮುಖಂಡರಾದ ಸರ್ಧಾರ ಪಟೇಲ, ಸಾವಯವ ಕೃಷಿ ತಜ್ಞ ಲತೀಪ ಪಟೇಲ ಮದರಾ, ದತ್ತು ಸುತಾರ, ಹಸನ್ ಪಟೇಲ, ರಮೇಶ ನಿಲೇಕರ, ಗುತ್ತಿಗೆದಾರರಾದ ಹನುಮಂತರಾಯ ನೂಲೆಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>