ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಕೇಶ್ವಾರದಲ್ಲಿ ಮತ್ತೆ ಕಂಪಿಸಿದ ಭೂಮಿ!

Last Updated 20 ಅಕ್ಟೋಬರ್ 2021, 4:44 IST
ಅಕ್ಷರ ಗಾತ್ರ

ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಭೂಕಂಪ ಪೀಡಿತ ಗಡಿಕೇಶ್ವಾರ ಗ್ರಾಮದಲ್ಲಿ ಬುಧವಾರ ನಸುಕಿನಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ ಎಂದು ಸ್ಥಳಿಯ ಮುಖಂಡರಾದ ಸಂತೋಷ ಬಳಿ ಮತ್ತು ವೀರೇಶ ಬೆಳಕೇರಿ ತಿಳಿಸಿದ್ದಾರೆ.

ನಸುಕಿನ 4.31 ಹಾಗೂ 6.52ಕ್ಕೆ ಭೂಮಿಯಿಂದ ಜೋರು ಸದ್ದು ಕೇಳಿಸಿದೆ. ಇದರಿಂದ ಭಯಭೀತರಾದ ಜನ ಮನೆಗಳಿಂದ ಹೊರಗೋಡಿ ಬಂದಿದ್ದಾರೆ.

ಈಗಾಗಲೇ ಸಾವಿರಾರು ಜನ ಗ್ರಾಮ ತೊರೆದಿದ್ದಾರೆ. ಕಂದಾಯ ಸಚಿವರು ಬಂದು ಕೇವಲ ಮನೆ ಗೋಡೆ ಕುಸಿದ 5 ಕುಟುಂಬಗಳಿಗೆ ಮಾತ್ರ ಪರಿಹಾರದ ಚೆಕ್ ವಿತರಿಸಿದರು. ಆದರೆ ಜನರ ಬೇಡಿಕೆಯ ಶೆಡ್ ನಿರ್ಮಾಣದ ಕುರಿತು ಸ್ಪಷ್ಟ ಭರವಸೆ ನೀಡಲಿಲ್ಲ ಎಂಬ ಅಸಮಾಧಾನ ಗ್ರಾಮಸ್ಥರಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT