ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಭೂಕಂಪ ಪೀಡಿತ ಗಡಿಕೇಶ್ವಾರ ಗ್ರಾಮದಲ್ಲಿ ಬುಧವಾರ ನಸುಕಿನಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ ಎಂದು ಸ್ಥಳಿಯ ಮುಖಂಡರಾದ ಸಂತೋಷ ಬಳಿ ಮತ್ತು ವೀರೇಶ ಬೆಳಕೇರಿ ತಿಳಿಸಿದ್ದಾರೆ.
ನಸುಕಿನ 4.31 ಹಾಗೂ 6.52ಕ್ಕೆ ಭೂಮಿಯಿಂದ ಜೋರು ಸದ್ದು ಕೇಳಿಸಿದೆ. ಇದರಿಂದ ಭಯಭೀತರಾದ ಜನ ಮನೆಗಳಿಂದ ಹೊರಗೋಡಿ ಬಂದಿದ್ದಾರೆ.
ಈಗಾಗಲೇ ಸಾವಿರಾರು ಜನ ಗ್ರಾಮ ತೊರೆದಿದ್ದಾರೆ. ಕಂದಾಯ ಸಚಿವರು ಬಂದು ಕೇವಲ ಮನೆ ಗೋಡೆ ಕುಸಿದ 5 ಕುಟುಂಬಗಳಿಗೆ ಮಾತ್ರ ಪರಿಹಾರದ ಚೆಕ್ ವಿತರಿಸಿದರು. ಆದರೆ ಜನರ ಬೇಡಿಕೆಯ ಶೆಡ್ ನಿರ್ಮಾಣದ ಕುರಿತು ಸ್ಪಷ್ಟ ಭರವಸೆ ನೀಡಲಿಲ್ಲ ಎಂಬ ಅಸಮಾಧಾನ ಗ್ರಾಮಸ್ಥರಲ್ಲಿದೆ.