<p><strong>ಗಡಿಕೇಶ್ವಾರ:</strong> ಕಂದಾಯ ಸಚಿವ ಆರ್.ಅಶೋಕ ಅವರು ಮಂಗಳವಾರ, ಚಿಂಚೋಳಿ ತಾಲ್ಲೂಕಿನ ಭೂಕಂಪನ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.</p>.<p>'ಈ ಲಘು ಭೂಕಂಪನದಿಂದ ಏನೂ ಅಪಾಯವಿಲ್ಲ ಇಂದು ವಿಜ್ಞಾನಿಗಳು ಹೇಳಿದ್ದಾರೆ. ಜನರು ಭಯಪಡಬೇಕಿಲ್ಲ. ಸರ್ಕಾರ ನಿಮ್ಮೊಂದಿಗೆ ಇದೆ. ಈಗಾಗಲೇ ಅಧ್ಯಯನ ನಡೆದಿದೆ. ಇದರ ಪೂರ್ಣ ವರದಿ ಬಂದ ಮೇಲೆ ಶಾಶ್ವತ ಪರಿಹಾರ ಮಾರ್ಗ ಕಂಡುಕೊಳ್ಳಲಾಗುವುದು' ಎಂದು ಸಚಿವ ಭರವಸೆ ನೀಡಿದರು.</p>.<p>ಗ್ರಾಮದಲ್ಲಿ ಪದೇ ಪದೇ ಸಂಭವಿಸುತ್ತಿರುವ ಭಾರಿ ಶಬ್ದ ಹಾಗೂ ಭೂಕಂಪನದ ಅನುಭವಗಳನ್ನು ಗ್ರಾಮಸ್ಥರು ಸಚಿವರೊಂದಿಗೆ ಹಂಚಿಕೊಂಡರು.</p>.<p>ಸಂಸದ ಡಾ.ಉಮೇಶ ಜಾಧವ, ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ, ಎಂ.ಎಲ್.ಸಿ. ಬಿ.ಜಿ.ಪಾಟೀಲ, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಜಿಲ್ಲಾ ಪಂಚಾಯಿತಿ ಸಿ.ಇ.ಒ ಡಾ.ದಿಲೀಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಡಿಕೇಶ್ವಾರ:</strong> ಕಂದಾಯ ಸಚಿವ ಆರ್.ಅಶೋಕ ಅವರು ಮಂಗಳವಾರ, ಚಿಂಚೋಳಿ ತಾಲ್ಲೂಕಿನ ಭೂಕಂಪನ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.</p>.<p>'ಈ ಲಘು ಭೂಕಂಪನದಿಂದ ಏನೂ ಅಪಾಯವಿಲ್ಲ ಇಂದು ವಿಜ್ಞಾನಿಗಳು ಹೇಳಿದ್ದಾರೆ. ಜನರು ಭಯಪಡಬೇಕಿಲ್ಲ. ಸರ್ಕಾರ ನಿಮ್ಮೊಂದಿಗೆ ಇದೆ. ಈಗಾಗಲೇ ಅಧ್ಯಯನ ನಡೆದಿದೆ. ಇದರ ಪೂರ್ಣ ವರದಿ ಬಂದ ಮೇಲೆ ಶಾಶ್ವತ ಪರಿಹಾರ ಮಾರ್ಗ ಕಂಡುಕೊಳ್ಳಲಾಗುವುದು' ಎಂದು ಸಚಿವ ಭರವಸೆ ನೀಡಿದರು.</p>.<p>ಗ್ರಾಮದಲ್ಲಿ ಪದೇ ಪದೇ ಸಂಭವಿಸುತ್ತಿರುವ ಭಾರಿ ಶಬ್ದ ಹಾಗೂ ಭೂಕಂಪನದ ಅನುಭವಗಳನ್ನು ಗ್ರಾಮಸ್ಥರು ಸಚಿವರೊಂದಿಗೆ ಹಂಚಿಕೊಂಡರು.</p>.<p>ಸಂಸದ ಡಾ.ಉಮೇಶ ಜಾಧವ, ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ, ಎಂ.ಎಲ್.ಸಿ. ಬಿ.ಜಿ.ಪಾಟೀಲ, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಜಿಲ್ಲಾ ಪಂಚಾಯಿತಿ ಸಿ.ಇ.ಒ ಡಾ.ದಿಲೀಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>