<p><strong>ಚಿಂಚೋಳಿ:</strong> ತಾಲ್ಲೂಕಿನ ಭೂಕಂಪನ ಪೀಡಿತ ಗಡಿಕೇಶ್ವಾರದಲ್ಲಿ ಶನಿವಾರ ಬೆಳಿಗ್ಗೆ 11.20ಕ್ಕೆ ಭೂಮಿಯಿಂದ ಜೋರು ಸದ್ದು ಕೇಳಿ ಬಂದಿದೆ ಎಂದು ಗ್ರಾಮದ ಯುವ ಮುಖಂಡ ವೀರೇಶ ಬೆಳಕೇರಿ ತಿಳಿಸಿದ್ದಾರೆ.</p>.<p>ಗ್ರಾಮದಲ್ಲಿ ನಿರಂತರ ಭೂಕಂಪನ ಹಾಗೂ ಭೂಮಿಯಿಂದ ಸದ್ದು ಕೇಳಿ ಬರುತ್ತಿದ್ದು ಇವುಗಳು ಭೂಕಂಪದ ಪೂರ್ವ ಕಂಪನಗಳೆ ಅಥವಾ ಲಘು ಕಂಪನ ಎಂಬುದು ಪತ್ತೆ ಹಚ್ಚಲು ವಿಜ್ಞಾನಿಗಳು ಅಧ್ಯಯನ ನಡೆಸುತ್ತಿದ್ದಾರೆ. ಶನಿವಾರ ಹೈದರಾಬಾದ್ನ ರಾಷ್ಟ್ರೀಯ ಭೂಭೌತವಿಜ್ಞಾನ ಸಂಸ್ಥೆಯ ವಿಜ್ಞಾನಿ ಸುರೇಶ ಗುಂಡಪತಿ ಬರುತ್ತಿದ್ದಾರೆ. ಭಾನುವಾರ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿಗಳಾದ ಡಾ. ರಮೇಶ ದಿಕ್ಪಾಲ್, ಡಾ. ಅಭಿನಯ, ಸಂತೋಷಕುಮಾರ ಭೇಟಿ ನೀಡಿ ಅಧ್ಯಯನ ಮುಂದುವರೆಸುವರು ಎಂದು ತಹಶೀಲ್ದಾರ್ ಅಂಜುಮ್ ತಬಸ್ಸುಮ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಇಂದು ಸಂಜೆ (ಅಕ್ಟೋಬರ್ 16) ಸಂಸದ ಡಾ. ಉಮೇಶ ಜಾಧವ್, ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಗಡಿಕೇಶ್ವಾರ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದು, ಗ್ರಾಮಸ್ಥರಿಗೆ ಧೈರ್ಯ ತುಂಬಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ:</strong> ತಾಲ್ಲೂಕಿನ ಭೂಕಂಪನ ಪೀಡಿತ ಗಡಿಕೇಶ್ವಾರದಲ್ಲಿ ಶನಿವಾರ ಬೆಳಿಗ್ಗೆ 11.20ಕ್ಕೆ ಭೂಮಿಯಿಂದ ಜೋರು ಸದ್ದು ಕೇಳಿ ಬಂದಿದೆ ಎಂದು ಗ್ರಾಮದ ಯುವ ಮುಖಂಡ ವೀರೇಶ ಬೆಳಕೇರಿ ತಿಳಿಸಿದ್ದಾರೆ.</p>.<p>ಗ್ರಾಮದಲ್ಲಿ ನಿರಂತರ ಭೂಕಂಪನ ಹಾಗೂ ಭೂಮಿಯಿಂದ ಸದ್ದು ಕೇಳಿ ಬರುತ್ತಿದ್ದು ಇವುಗಳು ಭೂಕಂಪದ ಪೂರ್ವ ಕಂಪನಗಳೆ ಅಥವಾ ಲಘು ಕಂಪನ ಎಂಬುದು ಪತ್ತೆ ಹಚ್ಚಲು ವಿಜ್ಞಾನಿಗಳು ಅಧ್ಯಯನ ನಡೆಸುತ್ತಿದ್ದಾರೆ. ಶನಿವಾರ ಹೈದರಾಬಾದ್ನ ರಾಷ್ಟ್ರೀಯ ಭೂಭೌತವಿಜ್ಞಾನ ಸಂಸ್ಥೆಯ ವಿಜ್ಞಾನಿ ಸುರೇಶ ಗುಂಡಪತಿ ಬರುತ್ತಿದ್ದಾರೆ. ಭಾನುವಾರ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿಗಳಾದ ಡಾ. ರಮೇಶ ದಿಕ್ಪಾಲ್, ಡಾ. ಅಭಿನಯ, ಸಂತೋಷಕುಮಾರ ಭೇಟಿ ನೀಡಿ ಅಧ್ಯಯನ ಮುಂದುವರೆಸುವರು ಎಂದು ತಹಶೀಲ್ದಾರ್ ಅಂಜುಮ್ ತಬಸ್ಸುಮ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಇಂದು ಸಂಜೆ (ಅಕ್ಟೋಬರ್ 16) ಸಂಸದ ಡಾ. ಉಮೇಶ ಜಾಧವ್, ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಗಡಿಕೇಶ್ವಾರ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದು, ಗ್ರಾಮಸ್ಥರಿಗೆ ಧೈರ್ಯ ತುಂಬಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>