<p><strong>ಕಲಬುರಗಿ</strong>: ‘ಈಡಿಗ ಸಮುದಾಯದ ಪ್ರಗತಿಗಾಗಿ 16 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 2026ರ ಜ. 6ರಿಂದ ಫೆ. 14ರವರೆಗೆ 3ನೇ ಹಂತದ ಪಾದಯಾತ್ರೆ ನಡೆಸಲಾಗುವುದು’ ಎಂದು ಕರದಾಳ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಹೇಳಿದರು.</p>.<p>ನಗರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತ್ಯುತ್ಸವ ಆಚರಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ‘ಈಡಿಗ ಸಮಾಜ ಬಹಳಷ್ಟು ಪೆಟ್ಟು ತಿಂದಿದೆ. ಸಮುದಾಯದವರ ಬವಣೆ ನೀಗಬೇಕಾದರೆ ಹೋರಾಟ ಅನಿವಾರ್ಯ’ ಎಂದರು.</p>.<p>‘ಸಮಾಜದ ಶ್ರೇಯೋಭಿವೃದ್ಧಿಗಾಗಿ ಈ ಹಿಂದೆ ಚಿಂಚೋಳಿಯಿಂದ ಕಲಬುರಗಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಎರಡು ಹಂತಗಳಲ್ಲಿ ಪಾದಯಾತ್ರೆ ಮಾಡಲಾಗಿತ್ತು. ಇದೀಗ ಕಲಬುರಗಿ ಜಿಲ್ಲೆಯ ಚಿತ್ತಾಪುರದ ಕರದಾಳ ಶಕ್ತಿಪೀಠದಿಂದ ಆರಂಭಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದವರೆಗೆ ಒಟ್ಟು 758 ಕಿ.ಮೀ ಪಾದಯಾತ್ರೆ ನಡೆಸಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಈಡಿಗ ಸಮುದಾಯದ ಪ್ರಗತಿಗಾಗಿ 16 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 2026ರ ಜ. 6ರಿಂದ ಫೆ. 14ರವರೆಗೆ 3ನೇ ಹಂತದ ಪಾದಯಾತ್ರೆ ನಡೆಸಲಾಗುವುದು’ ಎಂದು ಕರದಾಳ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಹೇಳಿದರು.</p>.<p>ನಗರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತ್ಯುತ್ಸವ ಆಚರಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ‘ಈಡಿಗ ಸಮಾಜ ಬಹಳಷ್ಟು ಪೆಟ್ಟು ತಿಂದಿದೆ. ಸಮುದಾಯದವರ ಬವಣೆ ನೀಗಬೇಕಾದರೆ ಹೋರಾಟ ಅನಿವಾರ್ಯ’ ಎಂದರು.</p>.<p>‘ಸಮಾಜದ ಶ್ರೇಯೋಭಿವೃದ್ಧಿಗಾಗಿ ಈ ಹಿಂದೆ ಚಿಂಚೋಳಿಯಿಂದ ಕಲಬುರಗಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಎರಡು ಹಂತಗಳಲ್ಲಿ ಪಾದಯಾತ್ರೆ ಮಾಡಲಾಗಿತ್ತು. ಇದೀಗ ಕಲಬುರಗಿ ಜಿಲ್ಲೆಯ ಚಿತ್ತಾಪುರದ ಕರದಾಳ ಶಕ್ತಿಪೀಠದಿಂದ ಆರಂಭಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದವರೆಗೆ ಒಟ್ಟು 758 ಕಿ.ಮೀ ಪಾದಯಾತ್ರೆ ನಡೆಸಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>