<p><strong>ಕಲಬುರ್ಗಿ:</strong>ಹೈದರಾಬಾದ್ ಕರ್ನಾಟಕ ಭಾಗದಲ್ಲೇ ಮೊದಲನೇ ಬಾರಿಗೆ ಮಹಿಳೆಯರಿಗಾಗಿ 1934ರಲ್ಲಿ ಶಾಲೆ ತೆರೆದು ಮಹಿಳೆಯರಲ್ಲಿ ಬೌದ್ಧಿಕ, ರಾಜಕೀಯ, ಸಾಮಾಜಿಕ ಪ್ರಜ್ಞೆ ಮೂಡಿಸುವಲ್ಲಿ ಶರಣಬಸವ ದೊಡ್ಡಪ್ಪ ಅಪ್ಪ ಅವರ ಶೈಕ್ಷಣಿಕ ಕೊಡುಗೆ ಅಪಾರವಾಗಿದೆ ಎಂದು ಡಾ.ನೀಲಾಂಬಿಕಾ ಶೇರಿಕಾರ್ ಹೇಳಿದರು.</p>.<p>ನಗರದ ಶರಣಬಸವ ವಿ.ವಿ.ಯ ಶತಮಾನೋತ್ಸವ ಸಭಾಂಗಣದಲ್ಲ್ಲಿ ಮಂಗಳವಾರ ಆಯೋಜಿಸಿದ್ದ ಇಂಡಕ್ಷನ್ (ದೀಕ್ಷಾರಂಭ- 2019) ಕಾರ್ಯಕ್ರಮದಲ್ಲಿ ಮಹಿಳಾ ಸಬಲೀಕರಣ ಬಗ್ಗೆ ಅವರು ವಿಶೇಷ ಉಪನ್ಯಾಸ ನೀಡಿದರು.</p>.<p>ಅದರ ಪೂರಕವಾಗಿ ಶರಣಬಸವಪ್ಪ ಅಪ್ಪ ಅವರು ಮಹಿಳಾ ಎಂಜಿನಿಯರಿಂಗ್ ಕಾಲೇಜು ತೆರೆದು ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.</p>.<p>ಪ್ರಸ್ತುತ ಮಹಿಳೆಯರು ಐಎಎಸ್, ಐಪಿಎಸ್, ಕೆಎಎಸ್, ಎಂಜಿನಿಯರಿಂಗ್ ತಂತ್ರಜ್ಞಾನ, ವೈದ್ಯಕೀಯ ಕ್ಷೇತ್ರ ಸೇರಿದಂತೆ ವಿವಿಧ ಉನ್ನತ ಮಟ್ಟದ ಕ್ಷೇತ್ರದಲ್ಲಿ ಮುಂದುವರಿಯುತ್ತಿರುವುದು ಹೆಮ್ಮೆಯ ಸಂಗತಿ. ಆದರೆ ಮಹಿಳೆಯರು ಕೇವಲ ಮಗುವಿಗೆ ಜನ್ಮ ನೀಡುವ ಯಂತ್ರವಾಗದೇ ಸಮಾಜಕ್ಕೆ ಆದರ್ಶವಾಗಿರಬೇಕು ಎಂದರು.</p>.<p>ಗಂಡು, ಹೆಣ್ಣು ಎನ್ನದೇ ಯಾವುದೇ ಭೇದಭಾವ ಮಾಡದೇ ಮಹಿಳೆಯರನ್ನು ಸಮಾಜದಲ್ಲಿ ಸಮಾನವಾಗಿ ಕಾಣಬೇಕು. ಅವರ ಸ್ವಾತಂತ್ರ್ಯಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು. ಪುರಷರಂತೆ ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಮಹಿಳೆಯರಿಗೆ ಸಮಾನವಾದ ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟರು.</p>.<p>ವಿ.ವಿ. ಕುಲಸಚಿವ ಡಾ.ಅನೀಲಕುಮಾರ ಬಿಡವೆ, ವಿ.ವಿ.ಯ ಸಮ ಕುಲಪತಿ ವಿ.ಡಿ.ಮೈತ್ರಿ, ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ, ಡೀನ್ ಡಾ.ಲಕ್ಷ್ಮಿ ಮಾಕಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong>ಹೈದರಾಬಾದ್ ಕರ್ನಾಟಕ ಭಾಗದಲ್ಲೇ ಮೊದಲನೇ ಬಾರಿಗೆ ಮಹಿಳೆಯರಿಗಾಗಿ 1934ರಲ್ಲಿ ಶಾಲೆ ತೆರೆದು ಮಹಿಳೆಯರಲ್ಲಿ ಬೌದ್ಧಿಕ, ರಾಜಕೀಯ, ಸಾಮಾಜಿಕ ಪ್ರಜ್ಞೆ ಮೂಡಿಸುವಲ್ಲಿ ಶರಣಬಸವ ದೊಡ್ಡಪ್ಪ ಅಪ್ಪ ಅವರ ಶೈಕ್ಷಣಿಕ ಕೊಡುಗೆ ಅಪಾರವಾಗಿದೆ ಎಂದು ಡಾ.ನೀಲಾಂಬಿಕಾ ಶೇರಿಕಾರ್ ಹೇಳಿದರು.</p>.<p>ನಗರದ ಶರಣಬಸವ ವಿ.ವಿ.ಯ ಶತಮಾನೋತ್ಸವ ಸಭಾಂಗಣದಲ್ಲ್ಲಿ ಮಂಗಳವಾರ ಆಯೋಜಿಸಿದ್ದ ಇಂಡಕ್ಷನ್ (ದೀಕ್ಷಾರಂಭ- 2019) ಕಾರ್ಯಕ್ರಮದಲ್ಲಿ ಮಹಿಳಾ ಸಬಲೀಕರಣ ಬಗ್ಗೆ ಅವರು ವಿಶೇಷ ಉಪನ್ಯಾಸ ನೀಡಿದರು.</p>.<p>ಅದರ ಪೂರಕವಾಗಿ ಶರಣಬಸವಪ್ಪ ಅಪ್ಪ ಅವರು ಮಹಿಳಾ ಎಂಜಿನಿಯರಿಂಗ್ ಕಾಲೇಜು ತೆರೆದು ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.</p>.<p>ಪ್ರಸ್ತುತ ಮಹಿಳೆಯರು ಐಎಎಸ್, ಐಪಿಎಸ್, ಕೆಎಎಸ್, ಎಂಜಿನಿಯರಿಂಗ್ ತಂತ್ರಜ್ಞಾನ, ವೈದ್ಯಕೀಯ ಕ್ಷೇತ್ರ ಸೇರಿದಂತೆ ವಿವಿಧ ಉನ್ನತ ಮಟ್ಟದ ಕ್ಷೇತ್ರದಲ್ಲಿ ಮುಂದುವರಿಯುತ್ತಿರುವುದು ಹೆಮ್ಮೆಯ ಸಂಗತಿ. ಆದರೆ ಮಹಿಳೆಯರು ಕೇವಲ ಮಗುವಿಗೆ ಜನ್ಮ ನೀಡುವ ಯಂತ್ರವಾಗದೇ ಸಮಾಜಕ್ಕೆ ಆದರ್ಶವಾಗಿರಬೇಕು ಎಂದರು.</p>.<p>ಗಂಡು, ಹೆಣ್ಣು ಎನ್ನದೇ ಯಾವುದೇ ಭೇದಭಾವ ಮಾಡದೇ ಮಹಿಳೆಯರನ್ನು ಸಮಾಜದಲ್ಲಿ ಸಮಾನವಾಗಿ ಕಾಣಬೇಕು. ಅವರ ಸ್ವಾತಂತ್ರ್ಯಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು. ಪುರಷರಂತೆ ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಮಹಿಳೆಯರಿಗೆ ಸಮಾನವಾದ ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟರು.</p>.<p>ವಿ.ವಿ. ಕುಲಸಚಿವ ಡಾ.ಅನೀಲಕುಮಾರ ಬಿಡವೆ, ವಿ.ವಿ.ಯ ಸಮ ಕುಲಪತಿ ವಿ.ಡಿ.ಮೈತ್ರಿ, ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ, ಡೀನ್ ಡಾ.ಲಕ್ಷ್ಮಿ ಮಾಕಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>