‘ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ಬದಲು ಇನ್ನು ಮುಂದೆ ಪ್ರಧಾನಮಂತ್ರಿ ಅಧ್ಯಕ್ಷ ಮತ್ತು ಮಾನವ ಸಂಪನ್ಮೂಲ ಸಚಿವರು ಕಾರ್ಯದರ್ಶಿಯಾದ ರಾಷ್ಟ್ರೀಯ ಶಿಕ್ಷಣ ಆಯೋಗವು ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದ ತೀರ್ಮಾನಗಳನ್ನು ಕೈಗೊಳ್ಳಲಿದೆ. ವಿಶ್ವವಿದ್ಯಾಲಯಕ್ಕೆ ಹಣಕಾಸು, ಪ್ರಾಧ್ಯಾಪಕರ ನೇಮಕಾತಿ, ಹೊಸ ವಿಶ್ವವಿದ್ಯಾಲಯಗಳಿಗೆ ಅನುಮತಿ ನೀಡುವ ಅಧಿಕಾರ ಪಡೆಯಲಿದೆ. ಸೇವಾ ಜ್ಯೇಷ್ಠತೆ ಬದಿಗಿಟ್ಟು ಮೆರಿಟ್ ಆಧಾರದ ಮೇಲೆ ಬಡ್ತಿ ಮಾಡುವುದಾಗಿ ತಿಳಿಸಿದೆ. ಹಾಗಿದ್ದರೆ, ಮೆರಿಟ್ ನಿರ್ಧರಿಸಲು ಅನುಸರಿಸುವ ಮಾನದಂಡಗಳೇನು’ ಎಂದು ಪ್ರಶ್ನಿಸಿದರು.