ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,‘ಕಲಬುರ್ಗಿಯ ಕಮಲಾಪುರ ತಾಲ್ಲೂಕಿನ ಓಕಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಕ್ರಮ ಅನುಕರಣೀಯ. ಕೋವಿಡ್ ಹಿನ್ನೆಲೆಯಲ್ಲಿ ಘೋಷಣೆಯಾದ ಸುದೀರ್ಘ ರಜೆ, ಮಕ್ಕಳು ಅಕ್ಷರ ಸಂಪರ್ಕದಿಂದ ದೂರಾಗುತ್ತಾರೆಂಬ ಆರೋಗ್ಯಕರವಾದ ಆತಂಕದಿಂದ ಈ ಶಿಕ್ಷಕರು ಮಕ್ಕಳ ಮನೆಮನೆಗೆ ತೆರಳಿ ಅವರು ನೆಲೆಸಿರುವ ಮನೆಗಳ ಆಸುಪಾಸಿನ ಬಯಲಿನಲ್ಲಿ ಪಾಠ ಮಾಡುತ್ತಿದ್ದಾರೆ. ಪಠ್ಯ ಬೋಧನೆಯಷ್ಟೇ ಅಲ್ಲ, ಮಕ್ಕಳಲ್ಲಿ ಕೋವಿಡ್ ಕುರಿತಾದ ಜಾಗೃತಿ ಮೂಡಿಸುತ್ತಿದ್ದಾರೆ’ ಎಂದಿದ್ದಾರೆ.