<p><strong>ಕಲಬುರ್ಗಿ:</strong> ಕಮಲಾಪುರ ತಾಲ್ಲೂಕಿನ ಓಕಳಿ ಗ್ರಾಮದಲ್ಲಿ ಕೊರೊನಾ ಮಧ್ಯೆಯೂ ಮಕ್ಕಳ ಬಳಿಗೆ ತೆರಳಿ ಶಿಕ್ಷಕರು ಪಾಠ ಮಾಡಿರುವುದಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶಕುಮಾರ್, ಮುಖ್ಯಶಿಕ್ಷಕ ಸಿದ್ರಾಮಪ್ಪ ಬಿರಾದಾರ ಅವರಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ.</p>.<p>‘ಮಕ್ಕಳ ಮನೆ ಎದುರೇ ಶಿಕ್ಷಕರಿಂದ ನಿತ್ಯ ಪಾಠ’ ವಿಶೇಷ ವರದಿ ಪ್ರಕಟಿಸಿದ ‘ಪ್ರಜಾವಾಣಿ’ಯ ಕಾರ್ಯಕ್ಕೆ ಧನ್ಯವಾದ ಅರ್ಪಿಸಿದ್ದಾರೆ.</p>.<p>ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,‘ಕಲಬುರ್ಗಿಯ ಕಮಲಾಪುರ ತಾಲ್ಲೂಕಿನ ಓಕಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಕ್ರಮ ಅನುಕರಣೀಯ. ಕೋವಿಡ್ ಹಿನ್ನೆಲೆಯಲ್ಲಿ ಘೋಷಣೆಯಾದ ಸುದೀರ್ಘ ರಜೆ, ಮಕ್ಕಳು ಅಕ್ಷರ ಸಂಪರ್ಕದಿಂದ ದೂರಾಗುತ್ತಾರೆಂಬ ಆರೋಗ್ಯಕರವಾದ ಆತಂಕದಿಂದ ಈ ಶಿಕ್ಷಕರು ಮಕ್ಕಳ ಮನೆಮನೆಗೆ ತೆರಳಿ ಅವರು ನೆಲೆಸಿರುವ ಮನೆಗಳ ಆಸುಪಾಸಿನ ಬಯಲಿನಲ್ಲಿ ಪಾಠ ಮಾಡುತ್ತಿದ್ದಾರೆ. ಪಠ್ಯ ಬೋಧನೆಯಷ್ಟೇ ಅಲ್ಲ, ಮಕ್ಕಳಲ್ಲಿ ಕೋವಿಡ್ ಕುರಿತಾದ ಜಾಗೃತಿ ಮೂಡಿಸುತ್ತಿದ್ದಾರೆ’ ಎಂದಿದ್ದಾರೆ.</p>.<p><strong>ಇದನ್ನೂ ಓದಿ:</strong><a href="http://ಕೋವಿಡ್ ಕಾಲದ ಕೋಲ್ಮಿಂಚುಗಳು... | ಮಕ್ಕಳ ಮನೆ ಎದುರೇ ಶಿಕ್ಷಕರಿಂದ ನಿತ್ಯ ಪಾಠ https://www.prajavani.net/stories/stateregional/daily-lessons-from-teachers-in-front-of-students-home-in-kalaburagi-744204.html" target="_blank">ಕೋವಿಡ್ ಕಾಲದ ಕೋಲ್ಮಿಂಚುಗಳು... | ಮಕ್ಕಳ ಮನೆ ಎದುರೇ ಶಿಕ್ಷಕರಿಂದ ನಿತ್ಯ ಪಾಠ </a></p>.<p>‘ಮುಖ್ಯೋಪಾಧ್ಯಾಯ ಸಿದ್ರಾಮಪ್ಪ ಬಿರಾದಾರ, ಎಸ್.ಡಿ.ಎಂ.ಸಿ ಅಧ್ಯಕ್ಷ ವೀರಣ್ಣ ಮಾಲಿಪಾಟೀಲ ಅವರಿಗೆ ಅಭಿನಂದನೆ. ಇಂತಹದೊಂದು ಸಕಾರಾತ್ಮಕ ವರದಿ ಪ್ರಕಟಿಸಿದ್ದಕ್ಕೆ ‘ಪ್ರಜಾವಾಣಿ’ಗೆ ಧನ್ಯವಾದಗಳು’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಕಮಲಾಪುರ ತಾಲ್ಲೂಕಿನ ಓಕಳಿ ಗ್ರಾಮದಲ್ಲಿ ಕೊರೊನಾ ಮಧ್ಯೆಯೂ ಮಕ್ಕಳ ಬಳಿಗೆ ತೆರಳಿ ಶಿಕ್ಷಕರು ಪಾಠ ಮಾಡಿರುವುದಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶಕುಮಾರ್, ಮುಖ್ಯಶಿಕ್ಷಕ ಸಿದ್ರಾಮಪ್ಪ ಬಿರಾದಾರ ಅವರಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ.</p>.<p>‘ಮಕ್ಕಳ ಮನೆ ಎದುರೇ ಶಿಕ್ಷಕರಿಂದ ನಿತ್ಯ ಪಾಠ’ ವಿಶೇಷ ವರದಿ ಪ್ರಕಟಿಸಿದ ‘ಪ್ರಜಾವಾಣಿ’ಯ ಕಾರ್ಯಕ್ಕೆ ಧನ್ಯವಾದ ಅರ್ಪಿಸಿದ್ದಾರೆ.</p>.<p>ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,‘ಕಲಬುರ್ಗಿಯ ಕಮಲಾಪುರ ತಾಲ್ಲೂಕಿನ ಓಕಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಕ್ರಮ ಅನುಕರಣೀಯ. ಕೋವಿಡ್ ಹಿನ್ನೆಲೆಯಲ್ಲಿ ಘೋಷಣೆಯಾದ ಸುದೀರ್ಘ ರಜೆ, ಮಕ್ಕಳು ಅಕ್ಷರ ಸಂಪರ್ಕದಿಂದ ದೂರಾಗುತ್ತಾರೆಂಬ ಆರೋಗ್ಯಕರವಾದ ಆತಂಕದಿಂದ ಈ ಶಿಕ್ಷಕರು ಮಕ್ಕಳ ಮನೆಮನೆಗೆ ತೆರಳಿ ಅವರು ನೆಲೆಸಿರುವ ಮನೆಗಳ ಆಸುಪಾಸಿನ ಬಯಲಿನಲ್ಲಿ ಪಾಠ ಮಾಡುತ್ತಿದ್ದಾರೆ. ಪಠ್ಯ ಬೋಧನೆಯಷ್ಟೇ ಅಲ್ಲ, ಮಕ್ಕಳಲ್ಲಿ ಕೋವಿಡ್ ಕುರಿತಾದ ಜಾಗೃತಿ ಮೂಡಿಸುತ್ತಿದ್ದಾರೆ’ ಎಂದಿದ್ದಾರೆ.</p>.<p><strong>ಇದನ್ನೂ ಓದಿ:</strong><a href="http://ಕೋವಿಡ್ ಕಾಲದ ಕೋಲ್ಮಿಂಚುಗಳು... | ಮಕ್ಕಳ ಮನೆ ಎದುರೇ ಶಿಕ್ಷಕರಿಂದ ನಿತ್ಯ ಪಾಠ https://www.prajavani.net/stories/stateregional/daily-lessons-from-teachers-in-front-of-students-home-in-kalaburagi-744204.html" target="_blank">ಕೋವಿಡ್ ಕಾಲದ ಕೋಲ್ಮಿಂಚುಗಳು... | ಮಕ್ಕಳ ಮನೆ ಎದುರೇ ಶಿಕ್ಷಕರಿಂದ ನಿತ್ಯ ಪಾಠ </a></p>.<p>‘ಮುಖ್ಯೋಪಾಧ್ಯಾಯ ಸಿದ್ರಾಮಪ್ಪ ಬಿರಾದಾರ, ಎಸ್.ಡಿ.ಎಂ.ಸಿ ಅಧ್ಯಕ್ಷ ವೀರಣ್ಣ ಮಾಲಿಪಾಟೀಲ ಅವರಿಗೆ ಅಭಿನಂದನೆ. ಇಂತಹದೊಂದು ಸಕಾರಾತ್ಮಕ ವರದಿ ಪ್ರಕಟಿಸಿದ್ದಕ್ಕೆ ‘ಪ್ರಜಾವಾಣಿ’ಗೆ ಧನ್ಯವಾದಗಳು’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>