‘ಮೂರು–ನಾಲ್ಕು ವರ್ಷಗಳಿಂದ ಕಾಲೊನಿಗೆ ರಸ್ತೆ, ಒಳ ಚರಂಡಿ ಸ್ವಚ್ಛತೆ, ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಸಮಸ್ಯೆಗಳ ನಿವಾರಣೆಗೆ ಮನವಿ ಸಲ್ಲಿಸಿದ್ದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಹೀಗಾಗಿ, ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯುವ ತೀರ್ಮಾನಕ್ಕೆ ಬಂದಿದ್ದೇವೆ’ ಎಂದು ಕಾಲೊನಿ ನಿವಾಸಿ ಎ.ಎಲ್.ಉಪಳಾಂವಕರ್ ‘ಪ್ರಜಾವಾಣಿ’ಗೆ ತಿಳಿಸಿದರು.