ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಪರ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಮತಯಾಚಿಸಿ ಮಾತನಾಡಿದ ಅವರು, ‘ಮಟ್ಟೂರ ಅವರು ಕಳೆದ ಆರು ವರ್ಷಗಳಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕಿ ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಶಿಕ್ಷಕರ ಬೇಡಿಕೆಗಳಿಗೆ ಒತ್ತಾಯಿಸಿ ಈ ಹಿಂದೆ ಸಿದ್ದರಾಮಯ್ಯ ಸಿ.ಎಂ ಆಗಿದ್ದಾಗ ಸರ್ಕಾರದ ವಿರುದ್ಧವೇ ಧರಣಿ ನಡೆಸಿದ್ದರು. ಇದನ್ನು ನೋಡಿದರೆ ಶಿಕ್ಷಕರು ಮಟ್ಟೂರ ಅವರನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ’ ಎಂದರು.