ಜಂಟಿ ಕೃಷಿ ನಿರ್ದೇಶಕ ಡಾ. ರತೇಂದ್ರನಾಥ ಸೂಗುರ ಅವರ ನೇತೃತ್ವದಲ್ಲಿ ಬೆಳಿಗ್ಗೆ ಚುನಾವಣೆ ನಡೆಸಲು ತೀರ್ಮಾನಿಸಲಾಗಿತ್ತು. ಈಗಾಗಲೇ 19 ಜನ ಚುನಾಯಿತ ನಿರ್ದೇಶಕರು ಆಯ್ಕೆಯಾಗಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕವಾಗಬೇಕಿದೆ. 19 ಜನ ನಿರ್ದೇಶಕರಲ್ಲಿ 10 ಜನರು ಕಾಂಗ್ರೆಸ್ ಬೆಂಬಲಿತರು ಮತ್ತು 9 ಜನ ಬಿಜೆಪಿ ಬೆಂಬಲಿತರು ಇದ್ದಾರೆ. ಸರ್ಕಾರದ ನಾಮನಿರ್ದೇಶಿತ ಪ್ರತಿನಿಧಿಯಾಗಿ ಚಂದ್ರಕಾಂತ ಸಂತಪೂರ ಮತ್ತು ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಬ್ಯಾಂಕ್ನ ಪ್ರತಿನಿಧಿಯಾಗಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.